Featured

ನಾಳೆಯಿಂದ ಕಟೀಲು ಯಕ್ಷಗಾನ ಮಂಡಳಿ ಆರೂ ಮೇಳಗಳ ತಿರುಗಾಟ ಆರಂಭ – vishwanews24

ನಾಳೆಯಿಂದ ಕಟೀಲು ಯಕ್ಷಗಾನ ಮಂಡಳಿ ಆರೂ ಮೇಳಗಳ ತಿರುಗಾಟ ಆರಂಭ

ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ತಿರುಗಾಟ ಡಿಸೆಂಬರ್ 7ರಂದು ಆರಂಭವಾಗಲಿದೆ. ಸಂಜೆ 5.15ಕ್ಕೆ ದೇವಸ್ಥಾನದಲ್ಲಿ ತಾಳಮದ್ದಳೆ ನಡೆಯಲಿದೆ. ಸಂಜೆ 6.45ಕ್ಕೆ ಕಲಾವಿದರಿಗೆ ಗೆಜ್ಜೆ ಹಸ್ತಾಂತರ, ರಾತ್ರಿ 8.30ಕ್ಕೆ ಚೌಕಿ ಪೂಜೆ ಬಳಿಕ ಆರು ರಂಗಸ್ಥಳಗಳಲ್ಲಿ ಏಕಕಾಲಕ್ಕೆ ಪೂರ್ವರಂಗ ಪ್ರದರ್ಶನ, 10.30ಕ್ಕೆ ಪಾಂಡವಾಶ್ವಮೇಧ ಯಕ್ಷಗಾನ ಬೆಳಗ್ಗಿನವರೆಗೆ ನಡೆಯಲಿದೆ ಎಂದು ಕಟೀಲು ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಸನತ್ ಕುಮಾರ್‌ ಶೆಟ್ಟಿ ತಿಳಿಸಿದ್ದಾರೆ.

ಈ ಬಾರಿ ಅಧಿಕಮಾಸದ ಕಾರಣ ತಿರುಗಾಟ ತಡವಾಗಿ ಆರಂಭವಾಗುತ್ತಿದ್ದು, ಮೇ 25ರತನಕ 167 ದಿನಗಳ ಯಕ್ಷಗಾನದ ತಿರುಗಾಟ ನಡೆಯಲಿದೆ. ಆಸ್ರಣ್ಣರು ಕಲಾವಿದರಿಗೆ ಗೆಜ್ಜೆ ಕೊಡುವ ಮೂಲಕ ತಿರುಗಾಟ ಆರಂಭವಾಗಲಿದ್ದ, ಅದಕ್ಕೂ ಮುನ್ನ ದೇವರ ಎದುರು ಮೇಳದ ದೇವರು, ಆಭರಣ, ಆಯುಧ, ಇತ್ಯಾದಿಗಳನ್ನು ಇಟ್ಟು ಪೂಜೆ ನಡೆಯಲಿದೆ ಎಂದು ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ ಹೇಳಿದ್ದಾರೆ.

ಈ ವರುಷ ಆರು ಮೇಳಗಳಿಂದ ಒಟ್ಟು 1002 ಸೇವೆಯಾಟಗಳು ಪ್ರದರ್ಶಿತವಾಗಲಿವೆ. ಪ್ರತಿ ವರ್ಷ 450 ಆಟಗಳು ಕಾಯಂ ಇದ್ದ ಕಾರಣ ಸುಮಾರು 550 ಆಟಗಳನ್ನು ಮಾತ್ರ ನೀಡಲು ಸಾಧ್ಯವಾಗಿದೆ. ಕಳೆದ ವರ್ಷ 774 ಹೊಸ ಆಟಗಳು ಬುಕಿಂಗ್ ಆಗಿವೆ ಎಂದು ಅವರು ತಿಳಿಸಿದ್ದಾರೆ. ವರ್ಷಂಪ್ರತಿ ಮೇಳದ ಉಡುಗೆ, ಮಣಿಸಾಮಾನು, ಪರಿಕರಗಳನ್ನು ರಿಪೇರಿ ಮಾಡಲಾಗುತ್ತಿದ್ದು, ಈ ಬಾರಿ ವೇಷ ಭೂಷಣಗಳನ್ನು ಹೊಸದಾಗಿ ತಯಾರಿಸಿದ್ದು, ಮಣಿ ಸಾಮಾನುಗಳಲ್ಲದೆ ಕಿರೀಟ ಮತ್ತಿತರ ಸಾಮಾಗ್ರಿ ಹೊಸದಾಗಿ ಸಿದ್ಧವಾಗಿವೆ. ಐದಾರು ಕಲಾವಿದರು ಹೊಸದಾಗಿ ಮೇಳಗಳಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೇಳಕ ಸಂಚಾಲಕ ಕಲ್ಲಾಡಿ ದೇವೀಪ್ರಸಾದ ಶೆಟ್ಟಿ ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago