ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ತಿರುಗಾಟ ಡಿಸೆಂಬರ್ 7ರಂದು ಆರಂಭವಾಗಲಿದೆ. ಸಂಜೆ 5.15ಕ್ಕೆ ದೇವಸ್ಥಾನದಲ್ಲಿ ತಾಳಮದ್ದಳೆ ನಡೆಯಲಿದೆ. ಸಂಜೆ 6.45ಕ್ಕೆ ಕಲಾವಿದರಿಗೆ ಗೆಜ್ಜೆ ಹಸ್ತಾಂತರ, ರಾತ್ರಿ 8.30ಕ್ಕೆ ಚೌಕಿ ಪೂಜೆ ಬಳಿಕ ಆರು ರಂಗಸ್ಥಳಗಳಲ್ಲಿ ಏಕಕಾಲಕ್ಕೆ ಪೂರ್ವರಂಗ ಪ್ರದರ್ಶನ, 10.30ಕ್ಕೆ ಪಾಂಡವಾಶ್ವಮೇಧ ಯಕ್ಷಗಾನ ಬೆಳಗ್ಗಿನವರೆಗೆ ನಡೆಯಲಿದೆ ಎಂದು ಕಟೀಲು ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಈ ಬಾರಿ ಅಧಿಕಮಾಸದ ಕಾರಣ ತಿರುಗಾಟ ತಡವಾಗಿ ಆರಂಭವಾಗುತ್ತಿದ್ದು, ಮೇ 25ರತನಕ 167 ದಿನಗಳ ಯಕ್ಷಗಾನದ ತಿರುಗಾಟ ನಡೆಯಲಿದೆ. ಆಸ್ರಣ್ಣರು ಕಲಾವಿದರಿಗೆ ಗೆಜ್ಜೆ ಕೊಡುವ ಮೂಲಕ ತಿರುಗಾಟ ಆರಂಭವಾಗಲಿದ್ದ, ಅದಕ್ಕೂ ಮುನ್ನ ದೇವರ ಎದುರು ಮೇಳದ ದೇವರು, ಆಭರಣ, ಆಯುಧ, ಇತ್ಯಾದಿಗಳನ್ನು ಇಟ್ಟು ಪೂಜೆ ನಡೆಯಲಿದೆ ಎಂದು ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ ಹೇಳಿದ್ದಾರೆ.
ಈ ವರುಷ ಆರು ಮೇಳಗಳಿಂದ ಒಟ್ಟು 1002 ಸೇವೆಯಾಟಗಳು ಪ್ರದರ್ಶಿತವಾಗಲಿವೆ. ಪ್ರತಿ ವರ್ಷ 450 ಆಟಗಳು ಕಾಯಂ ಇದ್ದ ಕಾರಣ ಸುಮಾರು 550 ಆಟಗಳನ್ನು ಮಾತ್ರ ನೀಡಲು ಸಾಧ್ಯವಾಗಿದೆ. ಕಳೆದ ವರ್ಷ 774 ಹೊಸ ಆಟಗಳು ಬುಕಿಂಗ್ ಆಗಿವೆ ಎಂದು ಅವರು ತಿಳಿಸಿದ್ದಾರೆ. ವರ್ಷಂಪ್ರತಿ ಮೇಳದ ಉಡುಗೆ, ಮಣಿಸಾಮಾನು, ಪರಿಕರಗಳನ್ನು ರಿಪೇರಿ ಮಾಡಲಾಗುತ್ತಿದ್ದು, ಈ ಬಾರಿ ವೇಷ ಭೂಷಣಗಳನ್ನು ಹೊಸದಾಗಿ ತಯಾರಿಸಿದ್ದು, ಮಣಿ ಸಾಮಾನುಗಳಲ್ಲದೆ ಕಿರೀಟ ಮತ್ತಿತರ ಸಾಮಾಗ್ರಿ ಹೊಸದಾಗಿ ಸಿದ್ಧವಾಗಿವೆ. ಐದಾರು ಕಲಾವಿದರು ಹೊಸದಾಗಿ ಮೇಳಗಳಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೇಳಕ ಸಂಚಾಲಕ ಕಲ್ಲಾಡಿ ದೇವೀಪ್ರಸಾದ ಶೆಟ್ಟಿ ತಿಳಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…