ಬೆಂಗಳೂರು: ಕಾಂಗ್ರೆಸ್ ನನ್ನ ಪ್ರಮುಖ ಶತ್ರುವಲ್ಲ. ನನ್ನ ಮತ್ತು ಸಿದ್ದರಾಮಯ್ಯನವರ ನಡುವೆ ಹೋರಾಟ ಇರಬಹುದು. ಆದರೆ, ಅವರು ನನ್ನ ಶತ್ರುವಲ್ಲ. ನಮ್ಮ ಸರ್ಕಾರ ಪತನಕ್ಕೆ ಕಾರಣವಾದ 15 ಶಾಸಕರು ಚುನಾವಣೆಯಲ್ಲಿ ಸೋಲಬೇಕು. ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
14 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿರುವ ಎಚ್.ಡಿ. ಕುಮಾರಸ್ವಾಮಿ, ನನಗೆ ಬಿಜೆಪಿ ಮೇಲೆ ವ್ಯಾಮೋಹ ಇಲ್ಲ. ಕಾಂಗ್ರೆಸ್ ಮೇಲೂ ವ್ಯಾಮೋಹವಿಲ್ಲ. ಆ ಎರಡೂ ಪಕ್ಷಗಳಿಗೆ ಬೇಕಾಗಿದ್ದಾಗ ನಮ್ಮ ಮೇಲೆ ವ್ಯಾಮೋಹ ಬರುತ್ತದೆ. ನಮ್ಮ ಸರ್ಕಾರ ಬೀಳಲು ಅನರ್ಹ ಶಾಸಕ ಡಾ. ಸುಧಾಕರ್ ಕಾರಣ. ಈಗ ಅವರೇ ನನ್ನ ಭೇಟಿ ಮಾಡಲು ಕಾಯುತ್ತಿದ್ದಾರೆ. ಕುಮಾರಸ್ವಾಮಿ ನನಗೆ ಆತ್ಮೀಯ, ಅವರ ಮೇಲೆ ನನಗೆ ಸಿಟ್ಟಿಲ್ಲ ಅಂತಿದ್ದಾರೆ. ಸುಧಾಕರ್ ಅವರ ಇತಿಹಾಸವೇನೆಂದು ನನಗೆ ಗೊತ್ತಿದೆ. ನನ್ನ ಬಗ್ಗೆ ಏನೆಲ್ಲ ಮಾತಾಡಿದ್ದಾನೆ ಎಂಬುದು ಕೂಡ ಗೊತ್ತಿದೆ. ಈಗ ಇದ್ದಕ್ಕಿದ್ದಂತೆ ಅವರಿಗೆ ನನ್ನ ನೆನಪಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ನಾನು ನಾಳೆಯಿಂದ ಚುನಾವಣಾ ಅಖಾಡಕ್ಕೆ ಇಳಿಯುತ್ತೇನೆ. ನಾನು ರಾಜಕೀಯಕ್ಕೆ ಸುಮ್ಮನೆ ಬಂದವನಲ್ಲ. ಆರಂಭದಿಂದಲೂ ಹೋರಾಟ ಮಾಡಿಕೊಂಡೇ ಬಂದಿದ್ದೇನೆ. ಯಾವ ಪಕ್ಷದವರು ಏನು ಮಾಡಿದ್ದಾರೆ ಎಂದು ಚರ್ಚೆ ಮಾಡೋಣ. ನಮ್ಮದು ಸಣ್ಣ ಪಕ್ಷ ಇರಬಹುದು. ಆದರೆ, ನಮ್ಮ ಪಕ್ಷವನ್ನು ಬುಡಸಮೇತ ಕೀಳೋದಕ್ಕೆ ಯಾರಿಂದಲೂ ಆಗೋದಿಲ್ಲ. ಅದರ ಮೂಲ ಎಲ್ಲಿದೆ ಅಂತ ಅವರಿಗೆ ಗೊತ್ತಿದೆ. ಆ ಕಾರಣದಿಂದಲೇ ಅಂತಹ ಪ್ರಯತ್ನ ಮಾಡುವುದು ಅಷ್ಟು ಸುಲಭವಲ್ಲ ಎಂದು ಅವರಿಗೆ ಅರ್ಥವಾಗಿದೆ ಎಂದು ಎಚ್ಡಿಕೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…