ನಾಳೆಯಿಂದ ದೇಶದಲ್ಲಿ ನಾಲ್ಕನೇ ಹಂತದ ಲಾಕ್ಡೌನ್,ಹೇಗಿರುತ್ತೆ ಓದಿ…vishwanews24

ನವದೆಹಲಿ: ಇಂದು ಮುಕ್ತಾಯಗೊಳ್ಳಬೇಕಿದ್ದ ದೇಶವ್ಯಾಪಿ ಲಾಕ್ ಡೌನ್ ಪರಿಸ್ಥಿತಿಯನ್ನು ಕೇಂದ್ರ ಸರಕಾರ ಈ ತಿಂಗಳಿನ ಅಂತ್ಯದವರೆಗೆ ಮುಂದುವರೆಸಿ ಆದೇಶ ಹೊರಡಿಸಿದೆ.

ಈ ಮೂಲಕ ಲಾಕ್ ಡೌನ್ 4.0 ಸೋಮವಾರದಿಂದ ಜಾರಿಗೆ ಬರಲಿದೆ. ಮಾರ್ಚ್ 25ರಂದು ದೇಶದಲ್ಲಿ ಮೊದಲನೇ ಹಂತದ ಲಾಕ್ ಡೌನ್ ವಿಧಿಸಲಾಗಿತ್ತು.

ಮತ್ತು ದೇಶದ ವಿವಿಧ ಕಡೆಗಳಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದರಿಂದ ಈ ಲಾಕ್ ಡೌನ್ ಅವಧಿಯಲ್ಲಿ ಇವುಗಳನ್ನು ಗಮನದಲ್ಲಿಟ್ಟುಕೊಂಡು ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಗೃಹಸಚಿವಾಲಯ ಸದ್ಯದಲ್ಲೇ ಪ್ರಕಟಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಲಾಕ್ ಡೌನ್ 4.0ಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯೊಂದು ಶನಿವಾರ ನಡೆದಿತ್ತು ಎಂದು ಉನ್ನತ ಮೂಲಗಳನ್ನು ಆಧರಿಸಿ ಇಂಡಿಯಾ ಟುಡೇ ವರದಿ ಮಾಡಿದೆ.

ಈ ಬಾರಿಯ ಲಾಕ್ ಡೌನ್ ಹೊಸ ಸುಧಾರಿತ ನಿಯಮಗಳೊಂದಿಗೆ ತೀರಾ ಭಿನ್ನ ಸ್ವರೂಪದಲ್ಲಿರಲಿದೆ ಎಂಬ ಸೂಚನೆಯನ್ನು ಪ್ರಧಾನಿ ಮೋದಿ ಅವರು ತಮ್ಮ ಇತ್ತೀಚಿನ ಭಾಷಣದ ಸಂದರ್ಭದಲ್ಲಿ ನೀಡಿದ್ದರು.

ಇದಕ್ಕೂ ಮೊದಲು, ಲಾಕ್ ಡೌನ್ ಸಂಬಂಧಿತ ಕ್ರಮಗಳ ಕುರಿತಾಗಿರುವಂತೆ ಶುಕ್ರವಾರದೊಳಗೆ ತಮ್ಮ ತಮ್ಮ ಪ್ರಸ್ತಾವನೆಗಳನ್ನು ಹಾಗೂ ವಿನಂತಿಗಳನ್ನು ಕೇಂದ್ರಕ್ಕೆ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆಯನ್ನು ನೀಡಲಾಗಿತ್ತು.

ಸಚಿವ ಸಂಪುಟ ಕಾರ್ಯದರ್ಶಿ ರಾಜೀವ ಗೌಬಾ ಅವರು ಇಂದು ರಾತ್ರಿ 9 ಗಂಟೆಗೆ ಎಲ್ಲಾ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾರ್ಯದರ್ಶಿಗಳು/ಡಿ.ಜಿ,ಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಮತ್ತು ಈ ಸಭೆಯಲ್ಲಿ ಲಾಕ್ ಡೌನ್ 4.0ದ ಮಾರ್ಗಸೂಚಿಗಳ ಕುರಿತಾಗಿ ಚರ್ಚಿಸಲಾಗುವುದು ಎಂದು ತಿಳಿದುಬಂದಿದೆ.

ಹೆಚ್ಚುವರಿ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.

Vishwa News 24

Recent Posts

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

16 minutes ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

26 minutes ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

30 minutes ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

47 minutes ago

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ – vishwanews24

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…

1 hour ago

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

21 hours ago