ನಾಳೆಯಿಂದ ಸರ್ಕಾರಿ ನೌಕರ ಮುಷ್ಕರ – ಮಧ್ಯಂತರ ವರದಿ ಪಡೆದು 7ನೇ ವೇತನ ಆಯೋಗ ಜಾರಿ : ಸಿಎಂ ಬೊಮ್ಮಾಯಿ – Vishwanews24
ನಾಳೆಯಿಂದ ಸರ್ಕಾರಿ ನೌಕರ ಮುಷ್ಕರ – ಮಧ್ಯಂತರ ವರದಿ ಪಡೆದು 7ನೇ ವೇತನ ಆಯೋಗ ಜಾರಿ : ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ರಾಜ್ಯ ಸರ್ಕಾರಿ ನೌಕರರಿಂದ 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಇದೇ ವೇಳೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಧ್ಯಂತರ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ.
ಈ ವರದಿಯನ್ನು ಪಡೆದು ವೇತನ ಆಯೋಗದ ವರದಿಯನ್ನು ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು 7ನೇ ವೇತನ ಆಯೋಗದಂತೆ ವೇತನ ಜಾರಿಗಾಗಿ ಸಮಿತಿಯನ್ನು ರಚಿಸಲಾಗಿದೆ. ಸಮತಿಯು ಸರ್ಕಾರ ವಹಿಸಿದಂತ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ. ಇದೀಗ ಮಧ್ಯಂತರ ವರದಿಯನ್ನು ತಯಾರಿಸುತ್ತಿದ್ದು, ವರದಿ ಕೈ ಸೇರಿದ ಕೂಡಲೇ 7ನೇ ವೇತನ ಆಯೋಗದಂತೆ ವೇತನವನ್ನು ಜಾರಿಗೊಳಿಸಲಾಗುವುದು ಎಂದರು.
2023-24ನೇ ಸಾಲಿನಲ್ಲೇ 7ನೇ ವೇತನ ಆಯೋಗವನ್ನು ಅನುಷ್ಠಾನಕ್ಕೆ ತರುತ್ತೇನೆ. ಬಜೆಟ್ ನಲ್ಲಿ 7ನೇ ವೇತನ ಆಯೋಗ ಜಾರಿಗೆ ಹಣ ಕೂಡ ಮೀಸಲಿಡಲಾಗಿದೆ. ಸರ್ಕಾರಿ ನೌಕರಿಗೆ ಶೀಘ್ರವೇ ಅದರಂತೆ ವೇತನ ಜಾರಿಗೂ ಕ್ರಮ ಕೈಗೊಳ್ಳಲಾಗುವುದಾಗಿ ತಿಳಿಸಿದರು.
