Featured

ನಾಳೆಯಿಂದ ಹಾಸನಾಂಬೆ ಉತ್ಸವ ; ದೇವಿಯ ದರ್ಶನ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ – vishwanews24

ನಾಳೆಯಿಂದ ಹಾಸನಾಂಬೆ ಉತ್ಸವ ; ದೇವಿಯ ದರ್ಶನ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ

ಹಾಸನ, : ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನೋತ್ಸವ ನಾಳೆಯಿಂದ ಆರಂಭಗೊಳ್ಳಲಿದೆ. ಅಕ್ಟೋಬರ್​ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದ್ದು, ಅ.10ರಿಂದ 22ರ ತನಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರಲಿದೆ. ಜಾತ್ರಾಮಹೋತ್ಸವಕ್ಕೆ ಅಗತ್ಯ ತಯಾರಿಯನ್ನ ಜಿಲ್ಲಾಡಳಿತ ಈಗಲೇ ಕೈಗೊಂಡಿದ್ದು, ದೇವಿಯ ದರ್ಶನ ವಿಚಾರದಲ್ಲಿ ಈ ಬಾರಿ ಒಂದಿಷ್ಟು ಬದಲಾವಣೆ ಮಾಡಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಸುಗಮ ದರ್ಶನಕ್ಕೆ ಭಕ್ತರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಸಾಮಾನ್ಯ ದರ್ಶನಕ್ಕೆ ಒಂದು ಸಾಲು, ಟಿಕೆಟ್ ಖರೀದಿಸಿ ಬರುವವರಿಗಾಗಿ ಎರಡು ಸಾಲು ಮತ್ತು ಶಿಷ್ಟಾಚಾರಕ್ಕೆ ಒಂದು ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10.30ರಿಂದ 12.30 ರವರೆಗೆ ಮಾತ್ರ ವಿಐಪಿಗಳಿಗೆ ದರ್ಶನಕ್ಕೆ ಅವಕಾಶವಿರಲಿದೆ. ಗಣ್ಯರ ಜೊತೆ ಬರುವ ನಾಲ್ವರಿಗೆ ಮಾತ್ರ ಶಿಷ್ಟಾಚಾರದ ಅಡಿ ದರ್ಶನಕ್ಕೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ದೇವಿ ದರ್ಶನಕ್ಕೆ ಬರುವ ಗಣ್ಯರು ಮೊದಲೇ ಮಾಹಿತಿ ನೀಡಿ ಬರಬೇಕು. ನಿಗದಿತ ಸಮಯದ ನಂತರ ಶಿಷ್ಟಾಚಾರ ಕೌಂಟರ್ ಬಂದ್ ಮಾಡಲಾಗುತ್ತದೆ. ವಿಐಪಿಗಳು ತಮ್ಮ ವಾಹನಗಳನ್ನು ಐಬಿಯಲ್ಲಿ ನಿಲ್ಲಿಸಿ, ಜಿಲ್ಲಾಡಳಿತದ ವಾಹನದಲ್ಲಿ ದೇವಾಲಯಕ್ಕೆ ಹೋಗಬೇಕು ಎಂದು ಡಿಸಿ ತಿಳಿಸಿದ್ದಾರೆ.

ಗೋಲ್ಡ್ ಕಾರ್ಡ್‌ ಪಡೆದು ಬರುವವರಿಗೂ ಸಮಯದ ಪರಿಮಿತಿ ನೀಡಲಾಗಿದ್ದು, ಬೆಳಿಗ್ಗೆ 7.30ರಿಂದ 10 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದ ಸಮಯದಲ್ಲಿ ಸಾಮಾನ್ಯ ಭಕ್ತರಿಗೆ ದರ್ಶನ ಇರುತ್ತದೆ. ಕುಡಿಯುವ ನೀರು, ಮಜ್ಜಿಗೆ ಸೇರಿ ಆರೋಗ್ಯ ಇಲಾಖೆ, ಅಗ್ನಿಶಾಮಕದಳ, ಪೊಲೀಸ್ ಇಲಾಖೆ ಒಳಗೊಂಡಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಹಾಸನಾಂಬೆ ದರ್ಶನಕ್ಕೆ ಬರುವವರಿಗಾಗಿ ಆನ್‌ಲೈನ್ ಬುಕ್ಕಿಂಗ್, ವಾಟ್ಸ್ಯಾಪ್​ ಚಾಟ್‌ಬಾಟ್ ಪರಿಚಯಿಸಲಾಗಿದೆ. ಎಐ ಟೆಕ್ನಾಲಜಿ ಮೂಲಕ ದೇವಿ ದರ್ಶನದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬಹುದು. ಜಾತ್ರೆ ಪ್ರಯುಕ್ತ ವಸ್ತು ಪ್ರದರ್ಶನ, ಡಾಗ್ ಶೋ, ಪಾಕ ಸ್ಪರ್ಧೆ, ಹೆಲಿ ಟೂರಿಸಂ, ಫಲಪುಷ್ಪ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ. ಹನ್ನೆರಡು ಟೂರ್ ಪ್ಯಾಕೇಜ್​ ಗಳನ್ನ ಪರಿಚಯಿಸಿರೋದಾಗಿ ಎಂದು ಕೆ.ಎಸ್. ಲತಾಕುಮಾರಿ ಹೇಳಿದ್ದಾರೆ.

ಡ್ರೆಸ್​ ಕೋಡ್​ ನಿಗದಿ

ಈ ಬಾರಿ‌ ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ಜಿಲ್ಲಾಡಳಿತ ಡ್ರೆಸ್ ಕೋಡ್ ನಿಗದಿಪಡಿಸಿದೆ. ದೇವಾಲಯಕ್ಕೆ ಬರುವ ಭಕ್ತರು ಸಾಂಪ್ರದಾಯಿಕ ಉಡುಗೆಯಲ್ಲಿ ಬಂದು ದೇವಿ ದರ್ಶನ ಮಾಡಬೇಕು ಎಂದು ಡಿಸಿ ಮನವಿ ಮಾಡಿದ್ದಾರೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

14 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

15 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

15 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

15 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

15 hours ago