Featured

ನಾಳೆಯಿಂದ 10 ದಿನ ಎಸ್ಕಾಂಗಳಲ್ಲಿಎಲ್ಲ ಅನ್​​ಲೈನ್​ ಸೇವೆಗಳು ಸ್ಥಗಿತ.. Vishwanews24

ನಾಳೆಯಿಂದ 10 ದಿನ ಎಸ್ಕಾಂ ಸೇವೆ ಬಂದ್ ..

ಸಾಫ್ಟ್​​ವೇರ್​ ಅಪ್ಡೇಟ್​ ಹಿನ್ನೆಲೆ ಎಸ್ಕಾಂಗಳಲ್ಲಿ 10 ದಿನಗಳ ಕಾಲ ಎಲ್ಲ ಅನ್​​ಲೈನ್​ ಸೇವೆಗಳು ಸ್ಥಗಿತಗೊಳ್ಳಲಿದೆ ಅಂತ ಇಂಧನ ಇಲಾಖೆ ಪ್ರಕಟಣೆ ಹೊರಡಿಸಿದೆ. ಅದರಂತೆ ಬೆಸ್ಕಾಂ, ಜೆಸ್ಕಾಂ, ಸೆಸ್ಕ್, ಮೆಸ್ಕಾಂ, ಹೆಸ್ಕಾಂನಲ್ಲಿ ಆನ್​ಲೈನ್ ಸೇವೆಗಳು ಸಿಗುವುದಿಲ್ಲ ಎಂದು ಈ ಮೂಲಕ ತಿಳಿಸಲಾಗಿದೆ.

ಮಾರ್ಚ್ 10 ರಿಂದ 19 ರವರೆಗೆ‌ ರಾಜ್ಯದ ಎಲ್ಲ ಎಸ್ಕಾಂಗಳ ವಿದ್ಯುತ್ ಬಿಲ್‌ ಪಾವತಿ, ಹೊಸ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಕೆ ಸೇರಿ ಯಾವ ಆನ್​ಲೈನ್ ಸೇವೆಗಳು ಲಭ್ಯವಿರೋದಿಲ್ಲ. ಆದರೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಮಾಡಲ್ಲ. ನಿರಂತರವಾಗಿ ವಿದ್ಯುತ್ ನೀಡಲಾಗುತ್ತದೆ. ಸಾಫ್ಟ್ ವೇರ್ ಅಪ್​ಗ್ರೇಡ್ ಸಂದರ್ಭದಲ್ಲಿ ವಿದ್ಯುತ್ ಪಾವತಿ ಮಾಡೋದಕ್ಕೆ ಕಷ್ಟ ಆಗಬಹುದು.

ಆದರೆ ಆ‌ ಸಂದರ್ಭ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದಿಲ್ಲ ಎಂದು ಇಂಧನ ಇಲಾಖೆ ಮಾಹಿತಿ ನೀಡಿದೆ. ಸರ್ವರ್ ಅಪ್ ಗ್ರೇಡ್ ಆರಂಭವಾದ ಬಳಿಕ ಸ್ಥಿರಗೊಳ್ಳಲು 15 ದಿನಗಳ ಕಾಲಾವಕಾಶ ಇರುತ್ತದೆ. ಹೀಗಾಗಿ ಈ ವೇಳೆ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಇದಕ್ಕೆ ಗ್ರಾಹಕರು ಸಹಕರಿಸಬೇಕು ಎಂದು ಇಲಾಖೆ ಮನವಿ ಮಾಡಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago