ನವದೆಹಲಿ: ನಾಳೆಯಿಂದ 2000 ರೂಪಾಯಿಗಳ ನೋಟುಗಳನ್ನು ಬದಲಾಯಿಸಿಕೊಳ್ಳುವುದಕ್ಕೆ ಆರಂಭಗೊಳ್ಳಲಿದೆ. ಸಾರ್ವಜನಿಕರು ಬ್ಯಾಂಕ್ ಗಳಲ್ಲಿ 2000 ಮುಖಬೆಲೆಯ ನೋಟುಗಳನ್ನು ಬದಲಾಯಿಸಿಕೊಳ್ಳುವುದಕ್ಕೆ ಯಾವುದೇ ನಮೂನೆಯ ಅರ್ಜಿ ಭರ್ತಿ ಮಾಡುವ ಅಗತ್ಯವಿಲ್ಲ.ಅಲ್ಲದೇ ಐಡಿ ಕಾರ್ಡ್ ಕೂಡ ಕೊಡಬೇಕಾಗಿಲ್ಲ.
ಭಾರತೀಯ ರಿಸರ್ವ್ ಬ್ಯಾಂಕ್ 2 ಸಾವಿರ ನೋಟುಗಳನ್ನು ಹಿಂಪಡೆದ ಬಳಿಕ, ಅಂತಹ ನೋಟುಗಳ ಬದಲಾವಣೆ ಪ್ರಕ್ರಿಯೆ ನಾಳೆಯಿಂದ ಆರಂಭಗೊಳ್ಳಲಿದೆ. ನೋಟುಗಳ ವಿನಿಮಯ ಅಥವಾ ಠೇವಣಿಗೆ ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಅಲ್ಲದೇ ಗುರುತಿನ ಚೀಟಿ ಸೇರಿದಂತೆ ಯಾವುದೇ ದಾಖಲೆಗಳನ್ನು ತೋರಿಸುವ ಅಗತ್ಯವಿರುವುದಿಲ್ಲ.
2 ಸಾವಿರ ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಹಲವು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದವು. ಇದಕ್ಕೆ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯ ಸ್ಪಷ್ಟೀಕರಣದ ಮಾಹಿತಿ ಬಿಡುಗಡೆ ಮಾಡಿದೆ. ಅದರಂತೆ ಮೇ.23ರಿಂದ ಆರಂಭವಾಗಲಿರುವ 2000 ನೋಟುಗಳ ವಿನಿಮಯ, ಠೇವಣಿಗೆ ನಮೂನೆಯನ್ನು ಭರ್ತಿ ಮಾಡುವುದು, ಗುರುತಿನ ಚೀಟಿ ಯಾವುದರ ಅಗತ್ಯವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ.
ಅಂದಹಾಗೇ 2000 ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಆರ್ ಬಿ ಐ ಮೇ.19ರಂದು ಆದೇಶ ಹೊರಡಿಸಿದೆ. ಮೇ.23ರಿಂದ ಸೆಪ್ಟೆಂಬರ್ 30, 2023ರ ಒಳಗಾಗಿ ಸಾರ್ವಜನಿಕರು 2000 ಮುಖಬೆಲೆಯ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಿದೆ. ನಾಳೆಯಿಂದ ಎಲ್ಲಾ ಬ್ಯಾಂಕ್ ಶಾಖೆಗಳಲ್ಲಿ ನೋಟುಗಳ ವಿನಿಮಯ ಆರಂಭವಾಗಲಿದೆ.
ಒಂದು ಬಾರಿಗೆ 20,000ರೂವರೆಗೆ ವಿನಿಮಯ ಮಾಡಿಕೊಳ್ಳಬೇಕು. 2000 ನೋಟುಗಳ ಠೇವಣಿಗೆ ಗರಿಷ್ಠ ಮಿತಿ ನಿಗದಿಪಡಿಸಿರುವುದಿಲ್ಲ. ಕರೆನ್ಸಿ ವಿನಿಮಯ ಉಚಿತವಾಗಿದ್ದು, ಯಾವುದೇ ಶುಲ್ಕ ಪಾವತಿಯ ಅಗತ್ಯವಿರುವುದಿಲ್ಲ. ಅರ್ಜಿ ಭರ್ತಿಮಾಡಿಕೊಡುವುದಾಗಲೀ, ಐಡಿ ಕಾರ್ಡ್ ಸಲ್ಲಿಸುವ ಅಗತ್ಯವೂ ಇರುವುದಿಲ್ಲ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…