ನವದೆಹಲಿ: ನಾಳೆಯಿಂದ 2000 ರೂಪಾಯಿಗಳ ನೋಟುಗಳನ್ನು ಬದಲಾಯಿಸಿಕೊಳ್ಳುವುದಕ್ಕೆ ಆರಂಭಗೊಳ್ಳಲಿದೆ. ಸಾರ್ವಜನಿಕರು ಬ್ಯಾಂಕ್ ಗಳಲ್ಲಿ 2000 ಮುಖಬೆಲೆಯ ನೋಟುಗಳನ್ನು ಬದಲಾಯಿಸಿಕೊಳ್ಳುವುದಕ್ಕೆ ಯಾವುದೇ ನಮೂನೆಯ ಅರ್ಜಿ ಭರ್ತಿ ಮಾಡುವ ಅಗತ್ಯವಿಲ್ಲ.ಅಲ್ಲದೇ ಐಡಿ ಕಾರ್ಡ್ ಕೂಡ ಕೊಡಬೇಕಾಗಿಲ್ಲ.
ಭಾರತೀಯ ರಿಸರ್ವ್ ಬ್ಯಾಂಕ್ 2 ಸಾವಿರ ನೋಟುಗಳನ್ನು ಹಿಂಪಡೆದ ಬಳಿಕ, ಅಂತಹ ನೋಟುಗಳ ಬದಲಾವಣೆ ಪ್ರಕ್ರಿಯೆ ನಾಳೆಯಿಂದ ಆರಂಭಗೊಳ್ಳಲಿದೆ. ನೋಟುಗಳ ವಿನಿಮಯ ಅಥವಾ ಠೇವಣಿಗೆ ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಅಲ್ಲದೇ ಗುರುತಿನ ಚೀಟಿ ಸೇರಿದಂತೆ ಯಾವುದೇ ದಾಖಲೆಗಳನ್ನು ತೋರಿಸುವ ಅಗತ್ಯವಿರುವುದಿಲ್ಲ.
2 ಸಾವಿರ ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಹಲವು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದವು. ಇದಕ್ಕೆ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯ ಸ್ಪಷ್ಟೀಕರಣದ ಮಾಹಿತಿ ಬಿಡುಗಡೆ ಮಾಡಿದೆ. ಅದರಂತೆ ಮೇ.23ರಿಂದ ಆರಂಭವಾಗಲಿರುವ 2000 ನೋಟುಗಳ ವಿನಿಮಯ, ಠೇವಣಿಗೆ ನಮೂನೆಯನ್ನು ಭರ್ತಿ ಮಾಡುವುದು, ಗುರುತಿನ ಚೀಟಿ ಯಾವುದರ ಅಗತ್ಯವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ.
ಅಂದಹಾಗೇ 2000 ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಆರ್ ಬಿ ಐ ಮೇ.19ರಂದು ಆದೇಶ ಹೊರಡಿಸಿದೆ. ಮೇ.23ರಿಂದ ಸೆಪ್ಟೆಂಬರ್ 30, 2023ರ ಒಳಗಾಗಿ ಸಾರ್ವಜನಿಕರು 2000 ಮುಖಬೆಲೆಯ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಿದೆ. ನಾಳೆಯಿಂದ ಎಲ್ಲಾ ಬ್ಯಾಂಕ್ ಶಾಖೆಗಳಲ್ಲಿ ನೋಟುಗಳ ವಿನಿಮಯ ಆರಂಭವಾಗಲಿದೆ.
ಒಂದು ಬಾರಿಗೆ 20,000ರೂವರೆಗೆ ವಿನಿಮಯ ಮಾಡಿಕೊಳ್ಳಬೇಕು. 2000 ನೋಟುಗಳ ಠೇವಣಿಗೆ ಗರಿಷ್ಠ ಮಿತಿ ನಿಗದಿಪಡಿಸಿರುವುದಿಲ್ಲ. ಕರೆನ್ಸಿ ವಿನಿಮಯ ಉಚಿತವಾಗಿದ್ದು, ಯಾವುದೇ ಶುಲ್ಕ ಪಾವತಿಯ ಅಗತ್ಯವಿರುವುದಿಲ್ಲ. ಅರ್ಜಿ ಭರ್ತಿಮಾಡಿಕೊಡುವುದಾಗಲೀ, ಐಡಿ ಕಾರ್ಡ್ ಸಲ್ಲಿಸುವ ಅಗತ್ಯವೂ ಇರುವುದಿಲ್ಲ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…