Featured

ನಾಳೆಯಿಂದ `KPTCL’ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ : ರಾಜ್ಯಾದ್ಯಂತ ವಿದ್ಯುತ್ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ – Vishwanews24

ನಾಳೆಯಿಂದ `KPTCL’ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ : ರಾಜ್ಯಾದ್ಯಂತ ವಿದ್ಯುತ್ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೋರೇಷನ್ ಲಿಮಿಟೆಡ್ ಮತ್ತು ರಾಜ್ಯದ ಎಲ್ಲ ಐದು ವಿದ್ಯುತ್ ಸರಬರಾಜು ಕಂಪನಿಗಳ ಮುಷ್ಕರರು ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದು, ರಾಜ್ಯಾದ್ಯಂತ ವಿದ್ಯುತ್ ಸಂಬಂಧಿತ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ವೇತನ ಪರಿಷ್ಕರಣೆ ಹೆಚ್ಚಿಸುವಂತೆ ಆಗ್ರಹಿಸಿ ಕವಿಪ್ರನಿ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟ ನೀಡಿದ್ದ ಮುಷ್ಕರದ ನೋಟೀಸ್ ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದೇ ಇರುವ ಹಿನ್ನಲೆಯಲ್ಲಿ ಅನಿವಾರ್ಯವಾಗಿ ನಿಗದಿಯಂತೆ ಮಾರ್ಚ್ 16 ರಿಂದ ಸಾಮೂಹಿಕವಾಗಿ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಕವಿಪ್ರನಿ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ಆರ್. ಹೆಚ್. ಲಕ್ಷ್ಮೀಪತಿ ಇತ್ತೀಚೆಗೆ ಹೇಳಿದ್ದರು.

ಇತ್ತೀಚೆಗೆ ನಡೆದ ಸಂಸ್ಥೆಗಳ ಒಕ್ಕೂಟದ ಸಭೆ ನಡೆಸಿದ ನಂತರ ಈ ವಿಷಯವನ್ನು ತಿಳಿಸಿದರು. ವೇತನ ಶ್ರೇಣಿಯನ್ನು ಹೆಚ್ಚಿಸುವಂತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಈಗಾಗಲೇ ಆಡಳಿತ ಮಂಡಳಿಗೆ 14 ದಿನಗಳ ಮುಷ್ಕರ ನೋಟೀಸ್ ಜಾರಿ ಮಾಡಲಾಗಿತ್ತು. ನೋಟೀಸ್ ಜಾರಿ ಮಾಡಿ ಹತ್ತುದಿನಗಳ ಕಳೆದರೂ ಇಲ್ಲಿಯವರೆಗೂ ನಮ್ಮ ಮಂಡಳಿಯಿಂದ ನಮ್ಮ ಬೇಡಿಕೆಗಳಿಗೆ ಪೂರಕವಾದ ಸ್ಪಂದನೆ ದೊರೆತಿಲ್ಲ. ಆದ್ದರಿಂದ ಅನಿವಾರ್ಯವಾಗಿ ಈಗಾಗಲೇ ನಿಗದಿಯಾಗಿರುವಂತೆ ಮಾರ್ಚ್ 16, 2023 ರಿಂದ ಸಾಮೂಹಿಕವಾಗಿ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರವನ್ನು ನಡೆಸಲು ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಿದ್ದೇವೆ ಎಂದು ಹೇಳಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

7 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago