ಬೆಂಗಳೂರು: ಕರ್ನಾಟಕವೂ ಸೇರಿದಂತೆ ದೇಶದ ನಾಲ್ಕೈದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಒಟ್ಟಿಗೆ ಪರಿಹಾರ ಘೋಷಣೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಇಲ್ಲವೇ ನಾಳೆ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆಯಾಗಲಿದೆ. ನೆರೆ ಪರಿಹಾರ ವಿಚಾರವಾಗಿ ಸಂಸದ ಪ್ರಹ್ಲಾದ್ ಜೋಷಿ ತಮ್ಮನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಕರ್ನಾಟಕವೂ ಸೇರಿದಂತೆ ದೇಶದ ನಾಲ್ಕೈದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಒಟ್ಟಿಗೆ ಪರಿಹಾರ ಘೋಷಣೆ ಮಾಡಲಿದೆ ಎಂದು ತಿಳಿಸಿದರು.
ಪ್ರವಾಹದಿಂದ ರಾಜ್ಯದಲ್ಲಿ ಸುಮಾರು 38 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಮೊದಲಿಗೆ ಅಂದಾಜಿಸಲಾಗಿತ್ತು. ಜನರ ಆಸ್ತಿ-ಪಾಸ್ತಿ ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ. ಇದರಿಂದಾಗಿ ರಾಜ್ಯಕ್ಕೆ ದೊಡ್ಡ ಅನಾಹುತ ಸಂಭವಿಸಿದೆ. ಪ್ರವಾಹದಿಂದ 100ಕ್ಕೂ ಹೆಚ್ಚು ಜನ ಮೃತ ಪಟ್ಟಿದ್ದಾರೆ. 2 ಸಾವಿರಕ್ಕೂ ಹೆಚ್ಚು ಪ್ರಾಣಿಗಳು ಸಾವನ್ನಪ್ಪಿವೆ. 103 ತಾಲೂಕು ಪ್ರವಾಹಕ್ಕೆ ತುತ್ತಾಗಿದೆ. 7.82 ಲಕ್ಷ ಹೆಕ್ಟೇರ್ ಬೆಳೆ ನಷ್ಟ ಆಗಿದೆ ಎಂದು ರಾಜ್ಯ ಸರ್ಕಾರವೂ ಕೇಂದ್ರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ಪ್ರಸ್ತಾಪಿಸಿತ್ತು. ಅಲ್ಲದೇ 38,000 ಕೋಟಿ ನೆರೆ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿಯೂ ಮಾಡಲಾಗಿತ್ತು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…