ಉಡುಪಿ

ನಾಳೆಯ ರಫೇಲ್ ವಿಮಾನ ಖರೀದಿ ಹಗರಣದ ವಿರುದ್ದ ಪ್ರತಿಭಟನೆ ಯಶಸ್ವಿಗೊಳಿಸಿ; ಅಮೃತ್ ಶೆಣೈ

ರಫೇಲ್ ವಿಮಾನ ಖರೀದಿ ಹಗರಣದ ವಿರುದ್ದ ಪ್ರತಿಭಟನೆ ಯಶಸ್ವಿಗೊಳಿಸಿ; ಅಮೃತ್ ಶೆಣೈ ವಿನಂತಿಉಡುಪಿ: ಕೇಂದ್ರ ಸರಕಾರ ನಡೆಸಿದ ರಫೇಲ್ ವಿಮಾನ ಖರೀದಿ ಹಗರಣದ ವಿರುದ್ದ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಕಾಂಗ್ರೆಸ್ ಸಪ್ಟೆಂಬರ್ 18ರಂದ ಆಯೋಜಿಸಿರುವ ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಸದಸ್ಯರಾದ ಅಮೃತ್ ಶೆಣೈ ಜಿಲ್ಲೆಯ ನಾಗರಿಕಲ್ಲಿ ವಿನಂತಿಸಿದ್ದಾರೆ.

ನಾಳೆ  ಸಪ್ಟೆಂಬರ್ 18ರಂದು ಬೆಳಿಗ್ಗೆ 10 ಗಂಟೆಗೆ ಮಣಿಪಾಲದ ಟೈಗರ್ ಸರ್ಕಲ್ ಬಳಿಯಿಂದ ಹೊರಟು ಜಿಲ್ಲಾಧಿಕಾರಿ ಕಚೇರಿಯ ವರೆಗೆ ಬೃಹತ್ ಪಾದಯಾತ್ರೆ ನಡೆಯಲಿದ್ದು ಬಳಿಕ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಸಭೆ ನಡೆಯಲಿದೆ. ಕೇಂದ್ರ ಸರಕಾರ ನಡೆಸಿದ ರಫೇಲ್ ಹಗರಣದ ವಿರುದ್ದ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಜನಸಾಮಾನ್ಯರಿಗೆ ನೀಡಿದ ಭರವಸೆಗಳನ್ನೆಲ್ಲಾ ಈಡೇರಿಸದೆ ಕೇವಲ ಕಾರ್ಪೊರೇಟ್ ಕಂಪೆನಿಗಳ ಪರವಾಗಿ ಕೆಲಸ ಮಾಡುವ ಪ್ರಧಾನಿಯವರ ಧೋರಣೆಗಳ ವಿರುದ್ದ ನಡೆಯುವ ಈ ಪಾದಯಾತ್ರೆಯಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಹಾಗೂ ಸಾಮಾಜಿಕ ಚಳುವಳಿಗಾರರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅವರು ಮನವಿ ಮಾಡಿದ್ದಾರೆ.

ಭಾರತ ದೇಶದಲ್ಲೇ ಇಷ್ಟೊಂದು ದೊಡ್ಡ ಮೊತ್ತದ ಹಗರಣ ಯಾವತ್ತೂ ನಡೆದಿಲ್ಲ ಅದಲ್ಲದೆ ದೇಶ ಬಿಟ್ಟು ಪರಾರಿಯಾದ ಸಾಲಗಾರ ಉದ್ಯಮಿಗಳ ಹಾಗೂ ಕೇಂದ್ರ ಸರಕಾರದ ಸಚಿವರುಗಳ ನಂಟಿನ ಬಗ್ಗೆ, ಪೆಟ್ರೋಲ್, ಗ್ಯಾಸ್ ದರ ಏರಿಕೆ ಬಗ್ಗೆ, ಡಾಲರ್ ಎದುರು ರೂಪಾಯಿ ಬೆಲೆ ದುರ್ಬಲ ಆಗುತ್ತಿರುವ ಬಗ್ಗೆಯೂ ಪ್ರತಿಭಟನಾ ಸಭೆಯಲ್ಲಿ ಜನಜಾಗೃತಿ ಮೂಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

19 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

19 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

19 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

22 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

22 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

22 hours ago