ಉಡುಪಿ

ನಾಳೆಯ ರಫೇಲ್ ವಿಮಾನ ಖರೀದಿ ಹಗರಣದ ವಿರುದ್ದ ಪ್ರತಿಭಟನೆ ಯಶಸ್ವಿಗೊಳಿಸಿ; ಅಮೃತ್ ಶೆಣೈ

ರಫೇಲ್ ವಿಮಾನ ಖರೀದಿ ಹಗರಣದ ವಿರುದ್ದ ಪ್ರತಿಭಟನೆ ಯಶಸ್ವಿಗೊಳಿಸಿ; ಅಮೃತ್ ಶೆಣೈ ವಿನಂತಿಉಡುಪಿ: ಕೇಂದ್ರ ಸರಕಾರ ನಡೆಸಿದ ರಫೇಲ್ ವಿಮಾನ ಖರೀದಿ ಹಗರಣದ ವಿರುದ್ದ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಕಾಂಗ್ರೆಸ್ ಸಪ್ಟೆಂಬರ್ 18ರಂದ ಆಯೋಜಿಸಿರುವ ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಸದಸ್ಯರಾದ ಅಮೃತ್ ಶೆಣೈ ಜಿಲ್ಲೆಯ ನಾಗರಿಕಲ್ಲಿ ವಿನಂತಿಸಿದ್ದಾರೆ.

ನಾಳೆ  ಸಪ್ಟೆಂಬರ್ 18ರಂದು ಬೆಳಿಗ್ಗೆ 10 ಗಂಟೆಗೆ ಮಣಿಪಾಲದ ಟೈಗರ್ ಸರ್ಕಲ್ ಬಳಿಯಿಂದ ಹೊರಟು ಜಿಲ್ಲಾಧಿಕಾರಿ ಕಚೇರಿಯ ವರೆಗೆ ಬೃಹತ್ ಪಾದಯಾತ್ರೆ ನಡೆಯಲಿದ್ದು ಬಳಿಕ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಸಭೆ ನಡೆಯಲಿದೆ. ಕೇಂದ್ರ ಸರಕಾರ ನಡೆಸಿದ ರಫೇಲ್ ಹಗರಣದ ವಿರುದ್ದ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಜನಸಾಮಾನ್ಯರಿಗೆ ನೀಡಿದ ಭರವಸೆಗಳನ್ನೆಲ್ಲಾ ಈಡೇರಿಸದೆ ಕೇವಲ ಕಾರ್ಪೊರೇಟ್ ಕಂಪೆನಿಗಳ ಪರವಾಗಿ ಕೆಲಸ ಮಾಡುವ ಪ್ರಧಾನಿಯವರ ಧೋರಣೆಗಳ ವಿರುದ್ದ ನಡೆಯುವ ಈ ಪಾದಯಾತ್ರೆಯಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಹಾಗೂ ಸಾಮಾಜಿಕ ಚಳುವಳಿಗಾರರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅವರು ಮನವಿ ಮಾಡಿದ್ದಾರೆ.

ಭಾರತ ದೇಶದಲ್ಲೇ ಇಷ್ಟೊಂದು ದೊಡ್ಡ ಮೊತ್ತದ ಹಗರಣ ಯಾವತ್ತೂ ನಡೆದಿಲ್ಲ ಅದಲ್ಲದೆ ದೇಶ ಬಿಟ್ಟು ಪರಾರಿಯಾದ ಸಾಲಗಾರ ಉದ್ಯಮಿಗಳ ಹಾಗೂ ಕೇಂದ್ರ ಸರಕಾರದ ಸಚಿವರುಗಳ ನಂಟಿನ ಬಗ್ಗೆ, ಪೆಟ್ರೋಲ್, ಗ್ಯಾಸ್ ದರ ಏರಿಕೆ ಬಗ್ಗೆ, ಡಾಲರ್ ಎದುರು ರೂಪಾಯಿ ಬೆಲೆ ದುರ್ಬಲ ಆಗುತ್ತಿರುವ ಬಗ್ಗೆಯೂ ಪ್ರತಿಭಟನಾ ಸಭೆಯಲ್ಲಿ ಜನಜಾಗೃತಿ ಮೂಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Vishwa News 24

Recent Posts

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

7 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

14 minutes ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

25 minutes ago

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

20 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

21 hours ago