ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಸೆ. 27ರಂದು ಉಡುಪಿಯ ಅಜ್ಜರಕಾಡು ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸಂಜೆ 6ಕ್ಕೆ ಜಿಲ್ಲಾಸ್ಪತ್ರೆಗೆ ಆಗಮಿಸಿ ಕುಂದುಕೊರತೆ ಪರಿಶೀಲಿಸಲಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ವಾಸ್ತವ್ಯ ಇರಲಿದ್ದಾರೆ.
1962ರಲ್ಲಿ ಸಬ್ ಡಿವಿಷನ್ ಆಸ್ಪತ್ರೆಯಾಗಿ ಆರಂಭಗೊಂಡ ಅಜ್ಜರಕಾಡು ಆಸ್ಪತ್ರೆ ವಾಸ್ತವವಾಗಿ ಇಂದಿಗೂ ಜಿಲ್ಲಾಸ್ಪತ್ರೆ ದರ್ಜೆಯ ಸೌಲಭ್ಯ ಹೊಂದಿಲ್ಲ. 1997ರಲ್ಲಿ ಉಡುಪಿ ಜಿಲ್ಲೆ ರಚನೆಯಾದ ಬಳಿಕ ನಾಮಫಲಕದಲ್ಲಿ ಮಾತ್ರ ಜಿಲ್ಲಾಸ್ಪತ್ರೆ ಎಂದಿದೆ. ಸೌಲಭ್ಯಗಳು ತಾಲೂಕು ಮಟ್ಟದ್ದಾಗಿಯೇ ಇವೆ.
ದಾನಿಗಳ ನೆರವಿನಿಂದ ಕೆಲವು ಸವಲತ್ತು ಒದಗಿಸಲಾಗಿದ್ದರೂ ವೈದ್ಯರು, ಸಿಬಂದಿಯ ಕೊರತೆ ತೀವ್ರವಾಗಿದೆ. ಪ್ರಸ್ತುತ ದಿನವೊಂದಕ್ಕೆ ಸುಮಾರು 890ರಿಂದ 900 ಮಂದಿ ರೋಗಿಗಳು ಹೊರರೋಗಿ ವಿಭಾಗಕ್ಕೆ ಬರುತ್ತಾರೆ.
ಆಸ್ಪತ್ರೆಯಲ್ಲಿ ಇರುವುದು 124 ಹಾಸಿಗೆಗಳು ಮಾತ್ರ. ಆದರೆ ಅನಿವಾರ್ಯವಾಗಿ 160ರಷ್ಟು ರೊಗಿಗಳನ್ನು ದಾಖಲಿಸಿಕೊಳ್ಳಲಾಗಿದೆ. ಇರುವ ವೈದ್ಯರು, ಸಿಬಂದಿಯ ಗರಿಷ್ಠ ಸೇವೆಯಿಂದ ಕೆಲವು ಸೇವೆಗಳು ಉತ್ತಮ ಮಟ್ಟದಲ್ಲಿ ದೊರೆಯುತ್ತಿದ್ದರೂ ಜಿಲ್ಲಾಸ್ಪತ್ರೆ ದರ್ಜೆಗೆ ಏರದಿದ್ದರೆ ಸಾರ್ವಜನಿಕರಿಗೆ ಅಗತ್ಯ ಸೇವೆಗಳು ದೊರೆಯುವುದು ಅಸಾಧ್ಯ. ಈ ಹಿನ್ನೆಲೆಯಲ್ಲಿ ಶ್ರೀರಾಮುಲು ಭೇಟಿ ಮತ್ತು ವಾಸ್ತವ್ಯ ಮಹತ್ವ ಪಡೆದುಕೊಂಡಿದೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…