ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮದುವೆ ಅದ್ಧೂರಿಯಾಗಿ ನಾಳೆ ಗೋವಾದಲ್ಲಿ ನಡೆಯಲಿದೆ.
ಗೋವಾದ ಲೀಲಾ ಪ್ಯಾಲೇಸ್ ಹೋಟೆಲ್ನಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಹೆಬ್ಬಾಳ್ಕರ್ ಪುತ್ರ ಮೃಣಾಲ್, ಡಾ.ಹಿತಾ ಅವರ ಕೈಹಿಡಿಯಲಿದ್ದಾರೆ. ನಿನ್ನೆ ರಾತ್ರಿ ಮೆಹಂದಿ ಕಾರ್ಯಕ್ರಮ ನೆರವೇರಿದ್ದು, ಇಂದು ಹಳದಿ ಕಾರ್ಯಕ್ರಮ ನಡೆಯಲಿದೆ. ಡಾ.ಹಿತಾ ಅವರು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ಸಹೋದರ ಬಿ.ಕೆ.ಶಿವಕುಮಾರ್ ಪುತ್ರಿ.
ನಾಳೆ ವಿವಾಹ ಸಮಾರಂಭದಲ್ಲಿ ಗಣ್ಯಾತಿಗಣ್ಯರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಕೋವಿಡ್ ಹಿನ್ನೆಲೆ ಆಪ್ತರು, ಗಣ್ಯರಿಗೆ ಮಾತ್ರ ವಿವಾಹ ಸಮಾರಂಭಕ್ಕೆ ಆಹ್ವಾನ ನೀಡಲಾಗಿದ್ದು, ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ ಪಾಲ್ಗೊಳ್ಳುವ ನಿರೀಕ್ಷೆ ಇದೆ.
500 ಅತಿಥಿಗಳಿಗೆ ಮಾತ್ರ ಆಹ್ವಾನ! ಕೊವಿಡ್ ಕಾರಣ ಕೆಲವೇ ಕೆಲವು ಗಣ್ಯರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಮೂಲಗಳ ಪ್ರಕಾರ 500 ಗಣ್ಯರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ವಿವಿಧ ಪಕ್ಷದ ನಾಯಕರು, ಚಲನಚಿತ್ರ ತಾರೆಯರು ಗೋವಾ ತಲುಪಿದ್ದು ಮದುವೆಗೆ ಸಾಕ್ಷಿಯಾಗಲಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…