ಪಕ್ಷದ ಸಂಘಟನಾತ್ಮಕ ದೃಷ್ಠಿಯಿಂದ ಬಿಜೆಪಿ ಜಿಲ್ಲಾ ಮಟ್ಟದ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶವು ಡಿ.15 ಬುಧವಾರ ಬೆಳಿಗ್ಗೆ ಗಂಟೆ 10.00ರಿಂದ ಉಡುಪಿ ಪುರ ಭವನದಲ್ಲಿ ನಡೆಯಲಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರವರ ಉಪಸ್ಥಿತಿಯಲ್ಲಿ ಜಿಲ್ಲೆಯ ಶಾಸಕರು ಮತ್ತು ಪಕ್ಷದ ವಿವಿಧ ಸ್ತರದ ಮುಖಂಡರ ಸಮಾಗಮದೊಂದಿಗೆ ನಡೆಯಲಿರುವ ಶಕ್ತಿಕೇಂದ್ರ ಪ್ರಮುಖರ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ, ರಾಜ್ಯ, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು
ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರು, ಮಂಡಲಗಳ ಪದಾಧಿಕಾರಿಗಳು, ಮಹಾ ಶಕ್ತಿಕೇಂದ್ರಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರು ಭಾಗವಹಿಸಲಿದ್ದಾರೆ.
ಬೆಳಿಗ್ಗೆ 10.00 ರಿಂದ 10.30 ಉಪಹಾರ ಮತ್ತು ನೋಂದಣಿ; 10.30ಕ್ಕೆ ಸಮಾವೇಶದ ಉದ್ಘಾಟನೆ; 11.00ಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್. ಸಂತೋಷ್ ಜೀ ಯವರಿಂದ ದಿಕ್ಸೂಚಿ ಭಾಷಣ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…