ಪಕ್ಷದ ಸಂಘಟನಾತ್ಮಕ ದೃಷ್ಠಿಯಿಂದ ಬಿಜೆಪಿ ಜಿಲ್ಲಾ ಮಟ್ಟದ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶವು ಡಿ.15 ಬುಧವಾರ ಬೆಳಿಗ್ಗೆ ಗಂಟೆ 10.00ರಿಂದ ಉಡುಪಿ ಪುರ ಭವನದಲ್ಲಿ ನಡೆಯಲಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರವರ ಉಪಸ್ಥಿತಿಯಲ್ಲಿ ಜಿಲ್ಲೆಯ ಶಾಸಕರು ಮತ್ತು ಪಕ್ಷದ ವಿವಿಧ ಸ್ತರದ ಮುಖಂಡರ ಸಮಾಗಮದೊಂದಿಗೆ ನಡೆಯಲಿರುವ ಶಕ್ತಿಕೇಂದ್ರ ಪ್ರಮುಖರ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ, ರಾಜ್ಯ, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು
ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರು, ಮಂಡಲಗಳ ಪದಾಧಿಕಾರಿಗಳು, ಮಹಾ ಶಕ್ತಿಕೇಂದ್ರಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರು ಭಾಗವಹಿಸಲಿದ್ದಾರೆ.
ಬೆಳಿಗ್ಗೆ 10.00 ರಿಂದ 10.30 ಉಪಹಾರ ಮತ್ತು ನೋಂದಣಿ; 10.30ಕ್ಕೆ ಸಮಾವೇಶದ ಉದ್ಘಾಟನೆ; 11.00ಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್. ಸಂತೋಷ್ ಜೀ ಯವರಿಂದ ದಿಕ್ಸೂಚಿ ಭಾಷಣ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…