ಪಕ್ಷದ ಸಂಘಟನಾತ್ಮಕ ದೃಷ್ಠಿಯಿಂದ ಬಿಜೆಪಿ ಜಿಲ್ಲಾ ಮಟ್ಟದ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶವು ಡಿ.15 ಬುಧವಾರ ಬೆಳಿಗ್ಗೆ ಗಂಟೆ 10.00ರಿಂದ ಉಡುಪಿ ಪುರ ಭವನದಲ್ಲಿ ನಡೆಯಲಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರವರ ಉಪಸ್ಥಿತಿಯಲ್ಲಿ ಜಿಲ್ಲೆಯ ಶಾಸಕರು ಮತ್ತು ಪಕ್ಷದ ವಿವಿಧ ಸ್ತರದ ಮುಖಂಡರ ಸಮಾಗಮದೊಂದಿಗೆ ನಡೆಯಲಿರುವ ಶಕ್ತಿಕೇಂದ್ರ ಪ್ರಮುಖರ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ, ರಾಜ್ಯ, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು
ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರು, ಮಂಡಲಗಳ ಪದಾಧಿಕಾರಿಗಳು, ಮಹಾ ಶಕ್ತಿಕೇಂದ್ರಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರು ಭಾಗವಹಿಸಲಿದ್ದಾರೆ.
ಬೆಳಿಗ್ಗೆ 10.00 ರಿಂದ 10.30 ಉಪಹಾರ ಮತ್ತು ನೋಂದಣಿ; 10.30ಕ್ಕೆ ಸಮಾವೇಶದ ಉದ್ಘಾಟನೆ; 11.00ಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್. ಸಂತೋಷ್ ಜೀ ಯವರಿಂದ ದಿಕ್ಸೂಚಿ ಭಾಷಣ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…