ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ನಾಳೆ ನಡೆಯಬೇಕಾಗಿದ್ದ ಜನೋತ್ಸವ ಸಮಾವೇಶ ಭಾನುವಾರ ಸೆ.11 ಕ್ಕೆ ಮುಂದೂಡಿಕೆ ಮಾಡಲಾಗಿದೆ. ಸಚಿವ ಉಮೇಶ್ ಕತ್ತಿ ಅವರ ನಿಧನದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಸರ್ಕಾರದ ಸಾಧನೆಗಳ ಬಗ್ಗೆ ಸಮಾವೇಶದ ಮೂಲಕ ಪ್ರಚಾರ ಪಡಿಸಬೇಕಾದ ಅನಿವಾರ್ಯತೆಯಿತ್ತು. ಹೀಗಾಗಿ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ಮುಂಬರುವ 2023ರ ವಿಧಾನಸಭಾ ಚುನಾವಣೆಯ ದಿಕ್ಸೂಚಿಯ ಆರಂಭ ಎಂದೇ ಹೇಳಲಾಗುತ್ತಿತ್ತು. ಆದರೆ ಇದೀಗ ರಾಜ್ಯ ಸರ್ಕಾರದ ಸಾಧನಾ ಸಮಾವೇಶವಾದ ಜನೋತ್ಸವವನ್ನು ಸೆ.11 ಕ್ಕೆ ಮುಂದೂಡಲಾಗಿದೆ.
ಈ ಸಮಾವೇಶವನ್ನು ಈ ಹಿಂದೆ ಜು.28ರಂದು ನಡೆಸಲು ಉದ್ದೇಶಿಸಲಾಗಿತ್ತು. ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಸಮಾವೇಶವನ್ನು ಆ.28ಕ್ಕೆ ಮುಂದೂಡಲಾಗಿತ್ತು. ಬಳಿಕ ಸೆ.8ರಂದು ನಡೆಸಲು ತೀರ್ಮಾನಿಸಲಾಗಿತ್ತು.ಇದೀಗ ಮೂರನೇ ಬಾರಿ ಜನೋತ್ಸವವನ್ನು ಮುಂದೂಡಿದಂತಾಗಿದೆ.
ಪ್ರವೀಣ್ ಹತ್ಯೆ ಪ್ರಕರಣವನ್ನು ಭಯೋತ್ಪಾದನಾ ಘಟನೆ ಎಂದು ತಿರುಚಲು ಎನ್ಐಎಗೆ ಸೂಚಿಸಲಾಗಿದೆ..
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…