ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆ
ಉಡುಪಿ: ಪೆರ್ಣಂಕಿಲ ಶಂಕರ ಪ್ರತಿಷ್ಠಾನ ವತಿಯಿಂದ ಪೆರ್ಣಂಕಿಲ ಶ್ರೀಶ ನಾಯಕ್ ನೇತೃತ್ವದಲ್ಲಿ ಕಾಪು ಬೀಚ್ ನಲ್ಲಿ ಅಕ್ಟೋಬರ್ 26ರಂದು ಬುಧವಾರ ಸಂಜೆ 4 ಗಂಟೆಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ ಆಯೋಜಿಸಲಾಗಿದೆ.
ಐದು ನೂರಕ್ಕೂ ಅಧಿಕ ಗೂಡು ದೀಪಗಳು ಸ್ಪರ್ಧೆಯಲ್ಲಿ ಕಾಣಸಿಗುವ ನಿರೀಕ್ಷೆಗಳಿದ್ದು ಅಂತರ್ ಜಿಲ್ಲೆಯಿಂದ ಕೂಡ ಸ್ಪರ್ಧಿಗಳು ಭಾಗವಹಿಸುವ ಸಾಧ್ಯತೆಗಳಿದೆ.ಸ್ಪರ್ಧೆಯಲ್ಲಿ ಮೂಲೆಗಳಿರುವ ಗೂಡುದೀಪ ಕಡ್ಡಾಯವಾಗಿದ್ದು, ಬಣ್ಣದ ಕಾಗದ, ಗ್ಲಾಸ್ ಪೇಪರ್, ಅಥವಾ ಬೆಗಡೆ ಉಪಯೋಗಿಸಿರಬೇಕು.
ಪ್ಲಾಸ್ಟಿಕ್, ಫ್ಲೆಕ್ಸ್, ಫೈಬರ್, ಥರ್ಮಾಕೋಲ್, ಹೂವು ಮರ, ಗ್ಲಾಸ್ ಇತ್ಯಾದಿಗಳನ್ನು ಉಪಯೋಗಿಸಿದರೆ ಸ್ಪರ್ಧೆಯಲ್ಲಿ ಪರಿಗಣಿಸುವುದಿಲ್ಲ. ಗೂಡುದೀಪಕ್ಕೆ ಬಾಲ ಇರಲೇಬೇಕು. ಸ್ಪರ್ಧೆಗೆ ವಯೋಮಿತಿ ಪರಿಗಣಿಸುವುದಿಲ್ಲ ಮತ್ತು ತೀರ್ಪುಗಾರರ ನಿರ್ಣಯವೇ ಅಂತಿಮವಾಗಿದೆ.
ವಿಜೇತರಿಗೆ ಪ್ರಥಮ ಬಹುಮಾನ ರೂ 11111, ದ್ವಿತೀಯ ರೂ 7777 ಮತ್ತು ತೃತೀಯ ಬಹುಮಾನ ರೂ 5555 ಇರಲಿದೆ
ಕಾರ್ಯಕ್ರಮದಲ್ಲಿ ಆಕರ್ಷಕ ಸುಡುಮದ್ದು ಪ್ರದರ್ಶನ ಇರಲಿದ್ದು, ಹೆಚ್ಚಿನ ಮಾಹಿತಿಗಾಗಿ 9886619748 (ಪ್ರವೀಣ್ ಪೂಜಾರಿ), 9008169918 (ಸಂತೋಷ್ ಕುಮಾರ್) ಸಂಪರ್ಕಿಸಬಹುದು .
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…