Featured

ನಾಳೆ (ಬುಧವಾರ) ಕಾಪು ಬೀಚ್ ನಲ್ಲಿ ಪೆರ್ಣಂಕಿಲ ಶಂಕರ ಪ್ರತಿಷ್ಠಾನ ವತಿಯಿಂದ ಶ್ರೀಶ ನಾಯಕ್ ನೇತೃತ್ವದಲ್ಲಿಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ :vishwanews24

ನಾಳೆ (ಬುಧವಾರ) ಕಾಪು ಬೀಚ್ ನಲ್ಲಿ ಪೆರ್ಣಂಕಿಲ ಶಂಕರ ಪ್ರತಿಷ್ಠಾನ ವತಿಯಿಂದ ಶ್ರೀಶ

ನಾಯಕ್ ನೇತೃತ್ವದಲ್ಲಿಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ :vishwanews24

ಗೆದ್ದವರಿಗೆ ನಗದು ಬಹುಮಾನ-

ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆ

ಉಡುಪಿ: ಪೆರ್ಣಂಕಿಲ ಶಂಕರ ಪ್ರತಿಷ್ಠಾನ ವತಿಯಿಂದ ಪೆರ್ಣಂಕಿಲ ಶ್ರೀಶ ನಾಯಕ್ ನೇತೃತ್ವದಲ್ಲಿ ಕಾಪು ಬೀಚ್ ನಲ್ಲಿ ಅಕ್ಟೋಬರ್ 26ರಂದು ಬುಧವಾರ ಸಂಜೆ 4 ಗಂಟೆಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ ಆಯೋಜಿಸಲಾಗಿದೆ.

ಐದು ನೂರಕ್ಕೂ ಅಧಿಕ ಗೂಡು ದೀಪಗಳು ಸ್ಪರ್ಧೆಯಲ್ಲಿ ಕಾಣಸಿಗುವ ನಿರೀಕ್ಷೆಗಳಿದ್ದು ಅಂತರ್ ಜಿಲ್ಲೆಯಿಂದ ಕೂಡ ಸ್ಪರ್ಧಿಗಳು ಭಾಗವಹಿಸುವ ಸಾಧ್ಯತೆಗಳಿದೆ.ಸ್ಪರ್ಧೆಯಲ್ಲಿ ಮೂಲೆಗಳಿರುವ ಗೂಡುದೀಪ ಕಡ್ಡಾಯವಾಗಿದ್ದು, ಬಣ್ಣದ ಕಾಗದ, ಗ್ಲಾಸ್ ಪೇಪರ್, ಅಥವಾ ಬೆಗಡೆ ಉಪಯೋಗಿಸಿರಬೇಕು.

ಪ್ಲಾಸ್ಟಿಕ್, ಫ್ಲೆಕ್ಸ್, ಫೈಬರ್, ಥರ್ಮಾಕೋಲ್, ಹೂವು ಮರ, ಗ್ಲಾಸ್ ಇತ್ಯಾದಿಗಳನ್ನು ಉಪಯೋಗಿಸಿದರೆ ಸ್ಪರ್ಧೆಯಲ್ಲಿ ಪರಿಗಣಿಸುವುದಿಲ್ಲ. ಗೂಡುದೀಪಕ್ಕೆ ಬಾಲ ಇರಲೇಬೇಕು. ಸ್ಪರ್ಧೆಗೆ ವಯೋಮಿತಿ ಪರಿಗಣಿಸುವುದಿಲ್ಲ ಮತ್ತು ತೀರ್ಪುಗಾರರ ನಿರ್ಣಯವೇ ಅಂತಿಮವಾಗಿದೆ.

ವಿಜೇತರಿಗೆ ಪ್ರಥಮ ಬಹುಮಾನ ರೂ 11111, ದ್ವಿತೀಯ ರೂ 7777 ಮತ್ತು ತೃತೀಯ ಬಹುಮಾನ ರೂ 5555 ಇರಲಿದೆ

ಕಾರ್ಯಕ್ರಮದಲ್ಲಿ ಆಕರ್ಷಕ ಸುಡುಮದ್ದು ಪ್ರದರ್ಶನ ಇರಲಿದ್ದು, ಹೆಚ್ಚಿನ ಮಾಹಿತಿಗಾಗಿ 9886619748 (ಪ್ರವೀಣ್ ಪೂಜಾರಿ), 9008169918 (ಸಂತೋಷ್ ಕುಮಾರ್) ಸಂಪರ್ಕಿಸಬಹುದು .

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

21 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

21 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

21 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago