ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಈ ಹಿಂದೆ ರಾಜ್ಯ ಸರಕಾರ ಆದೇಶಿಸಿದ್ದ ‘ಭಾನುವಾರದ ಲಾಕ್ ಡೌನ್’ ನಾಳೆ ಇರುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಸಚಿವಾಲಯದ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಸದ ಬಳಿಕ ಕೋವಿಡ್-19 ಸೋಂಕು ನಿಯಂತ್ರಣದ ಮತ್ತೊಂದು ವಿಧಾನವಾಗಿ ಭಾನುವಾರದ ಲಾಕ್ ಡೌನ್ ಗೆ ರಾಜ್ಯ ಸರಕಾರ ಆದೇಶಿಸಿತ್ತು. ನಂತರ ಮೊದಲ ಭಾನುವಾರ ಅಂದರೆ ಮೇ 24ರಂದು ಲಾಕ್ ಡೌನ್ ಮಾಡಲಾಗಿತ್ತು. ರಾಜ್ಯದಲ್ಲಿ ಈ ಲಾಕ್ ಡೌನ್ ಬಹುತೇಕ ಯಶಸ್ವಿಯಾಗಿತ್ತು.
ಆದರೆ ಅದರ ನಂತರದ ಭಾನುವಾರ ಅಂದರೆ ( ಮೇ 31) ರಂದು ಈ ಲಾಕ್ ಡೌನ್ ತೆರವುಗೊಳಿಸಲಾಗಿತ್ತು. ಸದ್ಯ ಬಹುತೇಕ ಎಲ್ಲಾ ಲಾಕ್ ಡೌನ್ ನಿರ್ಬಂಧಗಳು ಸಡಿಲವಾಗಿರುವ ಕಾರಣ ಇನ್ನೂ ಈ ಭಾನುವಾರದ ಲಾಕ್ ಡೌನ್ ಮುಂದುವರಿಯುವುದು ಅನುಮಾನ ಎನ್ನಲಾಗಿದೆ. ಆದರೆ ರಾತ್ರಿಯ ವೇಳೆಯ ಕರ್ಫ್ಯೂ ಯಥಾಸ್ಥಿತಿಯಂತೆ ಮುಂದುವರಿಯಲಿದೆ ಎನ್ನಲಾಗಿದೆ.
ನಾಳೆ (ಜೂ.7) ರವಿವಾರ ಲಾಕ್ ಡೌನ್ ರದ್ದಾಗಿರುವ ಬಗ್ಗೆ ಅಧಿಕೃತ ಆದೇಶ ಇಂದು ಸಂಜೆಯ ವೇಳೆಗೆ ಮುಖ್ಯಮಂತ್ರಿ ಸಚಿವಾಲಯದಿಂದ ಬರುವ ನಿರೀಕ್ಷೆಯಿದೆ.
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…