ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಈ ಹಿಂದೆ ರಾಜ್ಯ ಸರಕಾರ ಆದೇಶಿಸಿದ್ದ ‘ಭಾನುವಾರದ ಲಾಕ್ ಡೌನ್’ ನಾಳೆ ಇರುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಸಚಿವಾಲಯದ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಸದ ಬಳಿಕ ಕೋವಿಡ್-19 ಸೋಂಕು ನಿಯಂತ್ರಣದ ಮತ್ತೊಂದು ವಿಧಾನವಾಗಿ ಭಾನುವಾರದ ಲಾಕ್ ಡೌನ್ ಗೆ ರಾಜ್ಯ ಸರಕಾರ ಆದೇಶಿಸಿತ್ತು. ನಂತರ ಮೊದಲ ಭಾನುವಾರ ಅಂದರೆ ಮೇ 24ರಂದು ಲಾಕ್ ಡೌನ್ ಮಾಡಲಾಗಿತ್ತು. ರಾಜ್ಯದಲ್ಲಿ ಈ ಲಾಕ್ ಡೌನ್ ಬಹುತೇಕ ಯಶಸ್ವಿಯಾಗಿತ್ತು.
ಆದರೆ ಅದರ ನಂತರದ ಭಾನುವಾರ ಅಂದರೆ ( ಮೇ 31) ರಂದು ಈ ಲಾಕ್ ಡೌನ್ ತೆರವುಗೊಳಿಸಲಾಗಿತ್ತು. ಸದ್ಯ ಬಹುತೇಕ ಎಲ್ಲಾ ಲಾಕ್ ಡೌನ್ ನಿರ್ಬಂಧಗಳು ಸಡಿಲವಾಗಿರುವ ಕಾರಣ ಇನ್ನೂ ಈ ಭಾನುವಾರದ ಲಾಕ್ ಡೌನ್ ಮುಂದುವರಿಯುವುದು ಅನುಮಾನ ಎನ್ನಲಾಗಿದೆ. ಆದರೆ ರಾತ್ರಿಯ ವೇಳೆಯ ಕರ್ಫ್ಯೂ ಯಥಾಸ್ಥಿತಿಯಂತೆ ಮುಂದುವರಿಯಲಿದೆ ಎನ್ನಲಾಗಿದೆ.
ನಾಳೆ (ಜೂ.7) ರವಿವಾರ ಲಾಕ್ ಡೌನ್ ರದ್ದಾಗಿರುವ ಬಗ್ಗೆ ಅಧಿಕೃತ ಆದೇಶ ಇಂದು ಸಂಜೆಯ ವೇಳೆಗೆ ಮುಖ್ಯಮಂತ್ರಿ ಸಚಿವಾಲಯದಿಂದ ಬರುವ ನಿರೀಕ್ಷೆಯಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…