Featured

ನಾಳೆ ರಿಲೀಸ್​ ಆಗಲಿದೆ ಕೋಟಿಗೊಬ್ಬ 3 ಸಿನಿಮಾ : ಕ್ಷಮೆ ಯಾಚಿಸಿದ ಕಿಚ್ಚ ಸುದೀಪ್ – Vishwanews24

ನಾಳೆ ರಿಲೀಸ್​ ಆಗಲಿದೆ ಕೋಟಿಗೊಬ್ಬ 3 ಸಿನಿಮಾ : ಕ್ಷಮೆ ಯಾಚಿಸಿದ ಕಿಚ್ಚ ಸುದೀಪ್ – Vishwanews24

ತಾಂತ್ರಿಕ ಸಮಸ್ಯೆಯಿಂದಾಗಿ ಕಿಚ್ಚ ಸುದೀಪ್​ ಅಭಿನಯದ ಬಹುನಿರೀಕ್ಷಿತ ಸಿನಿಮಾ ಕೋಟಿಗೊಬ್ಬ 3 ಇಂದು ತೆರೆ ಕಾಣಲಿಲ್ಲ. ಆಯುಧಪೂಜೆ ಪ್ರಯುಕ್ತ ಬೆಳ್ಳಿತೆರೆಗೆ ಗ್ರ್ಯಾಂಡ್​ ಎಂಟ್ರಿ ಕೊಡಲು ತಯಾರಿ ನಡೆಸಿಕೊಂಡಿದ್ದ ಕೋಟಿಗೊಬ್ಬ 3 ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಎಲ್ಲ ಸರಿಯಾಗಿ ಇದ್ದಿದ್ದರೆ ಇಂದು ಬೆಳಗಿನಿಂದ ಸುದೀಪ್​ ಅಭಿಮಾನಿಗಳು ಸಂಭ್ರಮದಿಂದ ಚಿತ್ರಮಂದಿರಗಳಲ್ಲಿ ಹಬ್ಬ ಆಚರಿಸಬೇಕಿತ್ತು. ಆದರೆ ತಾಂತ್ರಿಕ ಸಮಸ್ಯೆಯಿಂದಾಗಿ ಸಿನಿಮಾ ಇವತ್ತು ರಿಲೀಸ್ ಆಗಿಲ್ಲ. ಇನ್ನು ಬೆಳಗಿನಿಂದ ಚಿತ್ರಮಂದಿರಗಳ ಬಳಿ ಬಂದು ಸಿನಿಮಾ ನೋಡಲು ಕಾಯುತ್ತಿರುವ ಸಿನಿಪ್ರಿಯರು ಬೇಸದಿಂದ ಮನೆಯತ್ತ ಮರಳುತ್ತಿದ್ದಾರೆ.

ಕಾರಣಾಂತರದಿಂದಾಗಿ ‘ಕೋಟಿಗೊಬ್ಬ 3’ ಚಿತ್ರ ರಿಲೀಸ್​ ಆಗದೇ ಇರುವುದಕ್ಕೆ ನಟ ಕಿಚ್ಚ ಸುದೀಪ್​ ಕ್ಷಮೆ ಯಾಚಿಸಿದ್ದಾರೆ. ಟ್ವೀಟ್​ ಮಾಡುವ ಮೂಲಕ ಆಗಿರುವ ಸಮಸ್ಯೆಗೆ ಕ್ಷಮಿಸಿ ಎಂದು ಮನವಿ ಮಾಡಿದ್ದಾರೆ.

‘ಚಿತ್ರಮಂದಿರಗಳ ಬಳಿ ಕಾಯುತ್ತಿರುವ ಎಲ್ಲ ಸ್ನೇಹಿತರಿಗೆ ಈ ಬಗ್ಗೆ ತಿಳಿಸುವ ಜವಾಬ್ದಾರಿ ನನ್ನದು. ಕಾರಣಾಂತರಗಳಿಂದಾಗಿ ಸಿನಿಮಾ ಪ್ರದರ್ಶನದಲ್ಲಿ ವ್ಯತ್ಯಯವಾಗಿದೆ. ಇದಕ್ಕೂ ಚಿತ್ರಮಂದಿರದವರಿಗೂ ಯಾವುದೇ ಸಂಬಂಧವಿಲ್ಲ. ಅವರ ಬಳಿ ಕೆಟ್ಟದಾಗಿ ಅಥವಾ ಸಿಟ್ಟಿನಿಂದ ನಡೆದುಕೊಳ್ಳಬೇಡಿ’ ಎಂದು ಸುದೀಪ್ ಮನವಿ ಮಾಡಿದ್ದಾರೆ.

‘ನನಗೂ ಸಿನಿಮಾವನ್ನು ರಿಲೀಸ್ ಮಾಡಲು ಕಾತರನಾಗಿದ್ದೇನೆ. ಇಷ್ಟು ದೊಡ್ಡ ಗ್ಯಾಪ್​ ನಂತರ ಚಿತ್ರವನ್ನು ತೆರೆಗೆ ತರುವ ಸಂಭ್ರಮದಲ್ಲಿದ್ದೇವೆ. ಆದರೆ ಇಂತಹ ಪರಿಸ್ಥಿತಿಯಲ್ಲಿ ಕೊಂಚ ತಾಳ್ಮೆ ಇರಲಿ. ದಯವಿಟ್ಟು ಚಿತ್ರಮಂದಿರ ಹಾಗೂ ಬಂದಿರುವ ಪ್ರೇಕ್ಷಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ. ಸಿನಿಮಾ ರಿಲೀಸ್ ಹಾಗೂ ಪ್ರದರ್ಶನದ ಸಮಯ ಕುರಿತಂತೆ ಶೀಘ್ರದಲ್ಲೇ ಮಾಹಿತಿ ನೀಡುತ್ತೇನೆ’ ಎಂದು ಟ್ವೀಟ್​ ಮಾಡಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago