ನಾಳೆ (ಶುಕ್ರವಾರ) ಸಂಭವಿಸಲಿದೆ ವರ್ಷದ 2ನೇ ಚಂದ್ರಗ್ರಹಣ -Vishwanews24

ಬೆಂಗಳೂರು: ಶುಕ್ರವಾರ ಚಂದ್ರಗ್ರಹಣ ಸಂಭವಿಸಲಿದೆ. ಈ ಬಾರಿಯ ಚಂದ್ರಗ್ರಹಣವೂ ಸಂಪೂರ್ಣವಾಗಿ ಭಿನ್ನವಾಗಿರಲಿದ್ದು, ಚಂದ್ರನ ಆಕಾರದಲ್ಲಿ ಯಾವುದೇ ಬದಲಾವಣೆ ಇರಲ್ಲ. ಗ್ರಹಣದ ಸಮಯದಲ್ಲಿ ಚಂದ್ರನು ಅರ್ಧಾಕಾರದಲ್ಲಿ ಕಾಣದೇ ತನ್ನ ಪೂರ್ಣ ಗಾತ್ರದಲ್ಲೇ ಚಲಿಸಲಿದ್ದಾನೆ.

ಈ ಚಂದ್ರಗ್ರಹಣವೂ ಕೂಡ ಪೂರ್ಣ ಅಥವಾ ಭಾಗಶಃ ಚಂದ್ರಗ್ರಹಣವಲ್ಲ. ಇದು ಆರಂಭದ ಎರಡು ಗ್ರಹಣಗಳಂತೆ ನೆರಳು ಚಂದ್ರಗ್ರಹಣವಾಗಿರುತ್ತದೆ. ಆದ್ದರಿಂದ ಈ ಗ್ರಹಣವು ಭಾರತದಲ್ಲಿ ಹೆಚ್ಚು ಪರಿಣಾಮ ಬೀರುವುದಿಲ್ಲ. ಈ ಗ್ರಹಣ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ ಎಂದು ನಂಬಲಾಗುತ್ತಿದ್ದು, ದೇಗುಲ ಬಂದ್ ಮಾಡೋದು, ಆಹಾರ ಸೇವನೆ ಮುಂತಾದ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇರಲ್ಲ. ಅರೆನೆರಳಿನ ಚಂದ್ರಗ್ರಹಣವನ್ನು ಸೂತಕ ಎಂದು ತಿಳಿಯಲ್ಲ ಎಂದು ಜ್ಯೋತಿಷಿಗಳು ಹೇಳುತ್ತಾರೆ.

ಎಲ್ಲೆಲ್ಲಿ ಗೋಚರ?: ಭಾರತ, ಏಷ್ಯಾದ ಕೆಲವು ಭಾಗ, ಆಸ್ಟ್ರೇಲಿಯಾ, ದಕ್ಷಿಣ ಅಮೆರಿಕಾ, ಯುರೋಪ್, ಆಫ್ರಿಕಾದಲ್ಲೂ ಚಂದ್ರಗ್ರಹಣ ಗೋಚರವಾಗಲಿದೆ. ಅರೆ ನೆರಳಿನ ಚಂದ್ರಗ್ರಹಣ ಇದಾಗಿದ್ದರಿಂದ ಚಂದ್ರನ ಆಕಾರದಲ್ಲಿ ಯಾವುದೇ ಬದಲಾವಣೆಗಳು ಇರಲ್ಲ. ಆದ್ರೆ ಚಂದ್ರನ ಚಿತ್ರಣವು ಅಥಾವ ಪ್ರಭಾವಳಿ ನಮಗೆ ಮುಸುಕಾಗಿ ಕಾಣುತ್ತದೆ.

ಗ್ರಹಣ ಕಾಲ: 2020ರ ಮೊದ ಚಂದ್ರಗ್ರಹಣ ಜನವರಿ 10ರಂದು ಸಂಭವಿಸಿತ್ತು. ಜೂನ್ 5ರಂದು ಮತ್ತೊಂದು ಚಂದ್ರ ಗ್ರಹಣ ಸಂಭವಿಸಲಿದೆ. ಇದೇ ತಿಂಗಳಿನಲ್ಲಿ ಜೂನ್ 21ರಂದು ಸೂರ್ಯ ಗ್ರಹಣ ಸಂಭವಿಸಲಿದೆ. ನಾಳೆಯ ಚಂದ್ರಗ್ರಹಣ ರಾತ್ರಿ 11.16ಕ್ಕೆ ಆರಂಭಗೊಂಡು 02.32ಕ್ಕೆ ಅಂತ್ಯವಾಗಲಿದೆ. ರಾತ್ರಿ 12.54ಕ್ಕೆ ಪೂರ್ಣ ಗ್ರಹಣ ಘೋಚರವಾಗಲಿದೆ. ಇದೇ ವರ್ಷ ಡಿಸೆಂಬರ್ 14ರಂದು ಇನ್ನೊಂದು ಸೂರ್ಯಗ್ರಹಣ ಗತಿಸಲಿದೆ.

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

15 hours ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

16 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

16 hours ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

17 hours ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

18 hours ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

18 hours ago