ನಾಳೆ (ಶುಕ್ರವಾರ) ಸಂಭವಿಸಲಿದೆ ವರ್ಷದ 2ನೇ ಚಂದ್ರಗ್ರಹಣ -Vishwanews24

ಬೆಂಗಳೂರು: ಶುಕ್ರವಾರ ಚಂದ್ರಗ್ರಹಣ ಸಂಭವಿಸಲಿದೆ. ಈ ಬಾರಿಯ ಚಂದ್ರಗ್ರಹಣವೂ ಸಂಪೂರ್ಣವಾಗಿ ಭಿನ್ನವಾಗಿರಲಿದ್ದು, ಚಂದ್ರನ ಆಕಾರದಲ್ಲಿ ಯಾವುದೇ ಬದಲಾವಣೆ ಇರಲ್ಲ. ಗ್ರಹಣದ ಸಮಯದಲ್ಲಿ ಚಂದ್ರನು ಅರ್ಧಾಕಾರದಲ್ಲಿ ಕಾಣದೇ ತನ್ನ ಪೂರ್ಣ ಗಾತ್ರದಲ್ಲೇ ಚಲಿಸಲಿದ್ದಾನೆ.

ಈ ಚಂದ್ರಗ್ರಹಣವೂ ಕೂಡ ಪೂರ್ಣ ಅಥವಾ ಭಾಗಶಃ ಚಂದ್ರಗ್ರಹಣವಲ್ಲ. ಇದು ಆರಂಭದ ಎರಡು ಗ್ರಹಣಗಳಂತೆ ನೆರಳು ಚಂದ್ರಗ್ರಹಣವಾಗಿರುತ್ತದೆ. ಆದ್ದರಿಂದ ಈ ಗ್ರಹಣವು ಭಾರತದಲ್ಲಿ ಹೆಚ್ಚು ಪರಿಣಾಮ ಬೀರುವುದಿಲ್ಲ. ಈ ಗ್ರಹಣ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ ಎಂದು ನಂಬಲಾಗುತ್ತಿದ್ದು, ದೇಗುಲ ಬಂದ್ ಮಾಡೋದು, ಆಹಾರ ಸೇವನೆ ಮುಂತಾದ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇರಲ್ಲ. ಅರೆನೆರಳಿನ ಚಂದ್ರಗ್ರಹಣವನ್ನು ಸೂತಕ ಎಂದು ತಿಳಿಯಲ್ಲ ಎಂದು ಜ್ಯೋತಿಷಿಗಳು ಹೇಳುತ್ತಾರೆ.

ಎಲ್ಲೆಲ್ಲಿ ಗೋಚರ?: ಭಾರತ, ಏಷ್ಯಾದ ಕೆಲವು ಭಾಗ, ಆಸ್ಟ್ರೇಲಿಯಾ, ದಕ್ಷಿಣ ಅಮೆರಿಕಾ, ಯುರೋಪ್, ಆಫ್ರಿಕಾದಲ್ಲೂ ಚಂದ್ರಗ್ರಹಣ ಗೋಚರವಾಗಲಿದೆ. ಅರೆ ನೆರಳಿನ ಚಂದ್ರಗ್ರಹಣ ಇದಾಗಿದ್ದರಿಂದ ಚಂದ್ರನ ಆಕಾರದಲ್ಲಿ ಯಾವುದೇ ಬದಲಾವಣೆಗಳು ಇರಲ್ಲ. ಆದ್ರೆ ಚಂದ್ರನ ಚಿತ್ರಣವು ಅಥಾವ ಪ್ರಭಾವಳಿ ನಮಗೆ ಮುಸುಕಾಗಿ ಕಾಣುತ್ತದೆ.

ಗ್ರಹಣ ಕಾಲ: 2020ರ ಮೊದ ಚಂದ್ರಗ್ರಹಣ ಜನವರಿ 10ರಂದು ಸಂಭವಿಸಿತ್ತು. ಜೂನ್ 5ರಂದು ಮತ್ತೊಂದು ಚಂದ್ರ ಗ್ರಹಣ ಸಂಭವಿಸಲಿದೆ. ಇದೇ ತಿಂಗಳಿನಲ್ಲಿ ಜೂನ್ 21ರಂದು ಸೂರ್ಯ ಗ್ರಹಣ ಸಂಭವಿಸಲಿದೆ. ನಾಳೆಯ ಚಂದ್ರಗ್ರಹಣ ರಾತ್ರಿ 11.16ಕ್ಕೆ ಆರಂಭಗೊಂಡು 02.32ಕ್ಕೆ ಅಂತ್ಯವಾಗಲಿದೆ. ರಾತ್ರಿ 12.54ಕ್ಕೆ ಪೂರ್ಣ ಗ್ರಹಣ ಘೋಚರವಾಗಲಿದೆ. ಇದೇ ವರ್ಷ ಡಿಸೆಂಬರ್ 14ರಂದು ಇನ್ನೊಂದು ಸೂರ್ಯಗ್ರಹಣ ಗತಿಸಲಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago