ನಾಳೆ (ಶುಕ್ರವಾರ) ಸಂಭವಿಸಲಿದೆ ವರ್ಷದ 2ನೇ ಚಂದ್ರಗ್ರಹಣ -Vishwanews24

ಬೆಂಗಳೂರು: ಶುಕ್ರವಾರ ಚಂದ್ರಗ್ರಹಣ ಸಂಭವಿಸಲಿದೆ. ಈ ಬಾರಿಯ ಚಂದ್ರಗ್ರಹಣವೂ ಸಂಪೂರ್ಣವಾಗಿ ಭಿನ್ನವಾಗಿರಲಿದ್ದು, ಚಂದ್ರನ ಆಕಾರದಲ್ಲಿ ಯಾವುದೇ ಬದಲಾವಣೆ ಇರಲ್ಲ. ಗ್ರಹಣದ ಸಮಯದಲ್ಲಿ ಚಂದ್ರನು ಅರ್ಧಾಕಾರದಲ್ಲಿ ಕಾಣದೇ ತನ್ನ ಪೂರ್ಣ ಗಾತ್ರದಲ್ಲೇ ಚಲಿಸಲಿದ್ದಾನೆ.

ಈ ಚಂದ್ರಗ್ರಹಣವೂ ಕೂಡ ಪೂರ್ಣ ಅಥವಾ ಭಾಗಶಃ ಚಂದ್ರಗ್ರಹಣವಲ್ಲ. ಇದು ಆರಂಭದ ಎರಡು ಗ್ರಹಣಗಳಂತೆ ನೆರಳು ಚಂದ್ರಗ್ರಹಣವಾಗಿರುತ್ತದೆ. ಆದ್ದರಿಂದ ಈ ಗ್ರಹಣವು ಭಾರತದಲ್ಲಿ ಹೆಚ್ಚು ಪರಿಣಾಮ ಬೀರುವುದಿಲ್ಲ. ಈ ಗ್ರಹಣ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ ಎಂದು ನಂಬಲಾಗುತ್ತಿದ್ದು, ದೇಗುಲ ಬಂದ್ ಮಾಡೋದು, ಆಹಾರ ಸೇವನೆ ಮುಂತಾದ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇರಲ್ಲ. ಅರೆನೆರಳಿನ ಚಂದ್ರಗ್ರಹಣವನ್ನು ಸೂತಕ ಎಂದು ತಿಳಿಯಲ್ಲ ಎಂದು ಜ್ಯೋತಿಷಿಗಳು ಹೇಳುತ್ತಾರೆ.

ಎಲ್ಲೆಲ್ಲಿ ಗೋಚರ?: ಭಾರತ, ಏಷ್ಯಾದ ಕೆಲವು ಭಾಗ, ಆಸ್ಟ್ರೇಲಿಯಾ, ದಕ್ಷಿಣ ಅಮೆರಿಕಾ, ಯುರೋಪ್, ಆಫ್ರಿಕಾದಲ್ಲೂ ಚಂದ್ರಗ್ರಹಣ ಗೋಚರವಾಗಲಿದೆ. ಅರೆ ನೆರಳಿನ ಚಂದ್ರಗ್ರಹಣ ಇದಾಗಿದ್ದರಿಂದ ಚಂದ್ರನ ಆಕಾರದಲ್ಲಿ ಯಾವುದೇ ಬದಲಾವಣೆಗಳು ಇರಲ್ಲ. ಆದ್ರೆ ಚಂದ್ರನ ಚಿತ್ರಣವು ಅಥಾವ ಪ್ರಭಾವಳಿ ನಮಗೆ ಮುಸುಕಾಗಿ ಕಾಣುತ್ತದೆ.

ಗ್ರಹಣ ಕಾಲ: 2020ರ ಮೊದ ಚಂದ್ರಗ್ರಹಣ ಜನವರಿ 10ರಂದು ಸಂಭವಿಸಿತ್ತು. ಜೂನ್ 5ರಂದು ಮತ್ತೊಂದು ಚಂದ್ರ ಗ್ರಹಣ ಸಂಭವಿಸಲಿದೆ. ಇದೇ ತಿಂಗಳಿನಲ್ಲಿ ಜೂನ್ 21ರಂದು ಸೂರ್ಯ ಗ್ರಹಣ ಸಂಭವಿಸಲಿದೆ. ನಾಳೆಯ ಚಂದ್ರಗ್ರಹಣ ರಾತ್ರಿ 11.16ಕ್ಕೆ ಆರಂಭಗೊಂಡು 02.32ಕ್ಕೆ ಅಂತ್ಯವಾಗಲಿದೆ. ರಾತ್ರಿ 12.54ಕ್ಕೆ ಪೂರ್ಣ ಗ್ರಹಣ ಘೋಚರವಾಗಲಿದೆ. ಇದೇ ವರ್ಷ ಡಿಸೆಂಬರ್ 14ರಂದು ಇನ್ನೊಂದು ಸೂರ್ಯಗ್ರಹಣ ಗತಿಸಲಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

13 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

14 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

14 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

15 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

15 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

16 hours ago