ಬೆಂಗಳೂರು : ರಾಜ್ಯದಲ್ಲಿ 11 ಜನರಿಗೆ ಬ್ರಿಟನ್ ರೂಪಾಂತರ ವೈರಸ್ ದೃಢಪಟ್ಟಿದೆ. ಬ್ರಿಟನ್ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಲಿರುವಂತ ಕ್ರಮಗಳ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಾಳೆ ಸುದ್ದಿಗೋಷ್ಠಿ ನಡೆಸಿ, ಮಹತ್ವದ ಮಾಹಿತಿ ನೀಡಲಿದ್ದಾರೆ. ಅಲ್ಲದೇ ರೂಪಾಂತರ ವೈರಸ್ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಮತ್ತೆ ರಾಜ್ಯದಲ್ಲಿ ಲಾಕ್ ಡೌನ್, ಸೀಲ್ ಡೌನ್ ನಂತಹ ಟಫ್ ರೂಲ್ಸ್ ಜಾರಿಗೆ ತರಲಿದ್ದಾರಾ ಎಂಬ ಕುತೂಹಲಕ್ಕೂ ಕಾರಣವಾಗಿದೆ.
ಬೆಂಗಳೂರಿನಲ್ಲಿ 7 ಜನರಿಗೆ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಾಲ್ವರಿಗೆ ಸೇರಿದಂತೆ ರಾಜ್ಯದಲ್ಲಿ ಒಟ್ಟು 11 ಜನರಿಗೆ ಬ್ರಿಟನ್ ರೂಪಾಂತರಿ ವೈರಸ್ ಶಾಕ್ ನೀಡಿದೆ. ಹೀಗಾಗಿ ಬಿಬಿಎಂಪಿ ವಸಂತಪುರ ಹಾಗೂ ಅಪಾರ್ಟ್ಮೆಂಟ್ ಸುತ್ತಾ ಮುತ್ತಾ ಹೈ ಅಲರ್ಟ್ ಘೋಷಿಸಿದೆ. ಇತ್ತ ಶಿವಮೊಗ್ಗ ಜಿಲ್ಲೆಗೂ ಕೊರೋನಾ ಶಾಕ್ ನೀಡಿದ್ದು, ಒಂದೇ ಕುಟುಂಬದ ನಾಲ್ವರಿಗೆ ಕೊರೋನಾ ರೂಪಾಂತರ ವೈರಸ್ ಸೋಂಕು ತಗುಲಿದೆ. ಹೀಗಾಗಿ ಜಿಲ್ಲಾಡಳಿತ ಕೂಡ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
ಇದೇ ಸಂದರ್ಭದಲ್ಲಿ ನಾಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬ್ರಿಟನ್ ವೈರಸ್ ನಿಯಂತ್ರಣ ಸಂಬಂಧ ಕೈಗೊಳ್ಳಲಿರುವಂತ ಕ್ರಮಗಳ ಕುರಿತಂತೆ ಸುದ್ದಿಗೋಷ್ಠಿ ನಡೆಸಿ, ಮಹತ್ವದ ಮಾಹಿತಿ ನೀಡಲಿದ್ದಾರೆ. ರಾಜ್ಯದಲ್ಲಿ ರೂಪಾಂತರ ವೈರಸ್ ನಿಯಂತ್ರಣಕ್ಕಾಗಿ ಲಾಕ್ ಡೌನ್, ಸೀಲ್ ಡೌನ್ ಹಾಗೂ ಕರ್ಪ್ಯೂ ನಂತರ ಟಫ್ ರೂಲ್ಸ್ ಜಾರಿಗೊಳಿಸಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ನಾಳೆಯವರೆಗೆ ಕಾದು ನೋಡಬೇಕಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…