ನವದೆಹಲಿ: ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ನಯಾಬ್ ಸಿಂಗ್ ಸೈನಿ ಅವರು ಇಂದು ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ನಯಾಬ್ ಸಿಂಗ್ ಸೈನಿ ಅವರು ನಾಳೆ 2ನೇ ಬಾರಿಗೆ ಹರಿಯಾಣದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹರಿಯಾಣದ ಪಂಚಕುಲದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್, ಮಾಜಿ ರಾಜ್ಯ ಸಚಿವ ಅನಿಲ್ ವಿಜ್ ಸೈನಿ ನಯಾಬ್ ಸಿಂಗ್ ಸೈನಿ ಅವರ ಹೆಸರನ್ನು ಪ್ರಸ್ತಾಪಿಸಿದರು. ಈ ವೇಳೆ ನಯಾಬ್ ಸಿಂಗ್ ಸೈನಿ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ ಅವರು, ಹರಿಯಾಣ ದೇಶದ ರಾಜಕೀಯ ಪಂಡಿತರನ್ನು ತಪ್ಪು ಎಂದು ಸಾಬೀತುಪಡಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ. ಈ ಮೂಲಕ ಸತತ ೩ನೇ ಬಾರಿಗೆ ಹರಿಯಾಣದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಲಿದೆ ಎಂದರು.
ಈ ವೇಳೆ ಮಾತನಾಡಿದ ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ನಯಾಬ್ ಸಿಂಗ್ ಸೈನಿ ಅವರು, ಹರಿಯಾಣದ ಜನರು ಪ್ರಧಾನಿ ನರೇಂದ್ರ ಮೋದಿಯವರ ನೀತಿಗಳಲ್ಲಿ ನಂಬಿಕೆ ಇಟ್ಟು 3ನೇ ಬಾರಿಗೆ ಬಿಜೆಪಿ ಸರ್ಕಾರವನ್ನು ರಚಿಸಿದ್ದಾರೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಪಡಿಸುವ ಪ್ರಧಾನಿ ಮೋದಿಯವರ ದೃಷ್ಟಿಕೋನಕ್ಕೆ ಬಲ ಸಿಕ್ಕಂತಾಗಿದೆ ಎಂದು ತಿಳಿಸಿದರು.
ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ ಗುರುಪುರ : ಶ್ರೀ…
*ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ* ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್,…
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…