ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಬಂಧಿಸಿರುವುದು ಫ್ಯಾಸಿಸ್ಟ್ ಧೋರಣೆಯ ಸರ್ಕಾರ. ಬಿಜೆಪಿಯಿಂದ ಕಾಂಗ್ರೆಸ್ ನವರನ್ನು ರಾಜಕೀಯವಾಗಿ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಬಿಜೆಪಿಯಲ್ಲಿ ಭ್ರಷ್ಟರು ಇಲ್ಲವೇ? ಅವರಲ್ಲಿ ಭ್ರಷ್ಟರನ್ನು ಬೆಳೆಸಲಾಗುತ್ತಿದೆ. ಜನರಲ್ಲಿ ಬಿಜೆಪಿ ವಿರುದ್ದ ಆಕ್ರೋಶ ಹೆಚ್ಚಾಗುತ್ತಿದೆ. ಡಿಕೆಶಿಯವರನ್ನು ನಾಲ್ಕು ದಿನ ವಿಚಾರಣೆ ಮಾಡಿ ಬಂಧಿಸುವ ಅಗತ್ಯ ಏನಿತ್ತು? ಕಾನೂನು ಪ್ರಕಾರ ಮಾಡೋದಾಗಿದ್ರೆ ಪ್ರಾಸಿಕ್ಯೂಟ್ ಮಾಡಬೇಕಿತ್ತು ಎಂದು ಹೇಳಿದರು.
ಯಡಿಯೂರಪ್ಪ ಈಗ ಏನೇ ಅನುಕಂಪದ ಮಾತನಾಡಬಹುದು. ಜನಾಕ್ರೋಶ ಬಿಜೆಪಿ ವಿರುದ್ದಇದೆ ಅನ್ನೋದು ಯಡಿಯೂರಪ್ಪಗೂ ಅರ್ಥವಾಗಿದೆ. ಆದರೆ ಯಡಿಯೂರಪ್ಪ ನ ಮಾತನ್ನು ದೆಹಲಿಯಲ್ಲಿ ಯಾರೂ ಕೇಳುವುದಿಲ್ಲ ಎಂದು ಬಿಜೆಪಿ ಮತ್ತು ಯಡಿಯೂರಪ್ಪ ವಿರುದ್ಧ ಗುಡುಗಿದರು.
ನಾವು ಏನೇ ಫೇಲ್ ಆಗಿರಬಹುದು, ಆದರೆ ತುರ್ತು ಪರಿಸ್ಥಿತಿಯಂತ ವಾತಾವರಣ ಸೃಷ್ಟಿಯಾಗಿದೆ. ಇದನ್ನು ನಾವು ಇಲ್ಲಿಗೇ ನಿಲ್ಲಿಸೋದಿಲ್ಲ. ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…