ಅಮೇಥಿ: ರಾಹುಲ್ ಗಾಂಧಿ ಅವರ ಅಮೇಥಿ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ಪ್ರಿಯಾಂಕಾ ಗಾಂಧಿ ಅವರು ತಮ್ಮ ಅಣ್ಣ ಪ್ರಧಾನಿಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಿನ್ನೆ ಅಮೇಥಿಗೆ ಭೇಟಿ ನೀಡಿದ ಅವರು ಇಂದು ರಾಯ್ ಬರೇಲಿಗೆ ತೆರಳಲಿದ್ದಾರೆ. ಈ ಎರಡು ಕ್ಷೇತ್ರಗಳಲ್ಲಿ ತಳಮಟ್ಟದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸವನ್ನು ಪ್ರಿಯಾಂಕಾ ಮಾಡುತ್ತಿದ್ಧಾರೆ.
“ನಾವು ಈ ಲೋಕಸಭೆ ಚುನಾವಣೆ ಗೆಲ್ಲುತ್ತೇವೆ. ರಾಹುಲ್ ಪ್ರಧಾನಿಯಾಗುತ್ತಾರೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ನೆಹರೂ ಕುಟುಂಬದ ಸದಸ್ಯರೊಬ್ಬರು ರಾಹುಲ್ ಗಾಂಧಿ ಅವರು ಪ್ರಧಾನಿ ಆಗಲಿ ಎಂದು ಹೇಳಿದ್ದು ಇದೇ ಮೊದಲು ಎನ್ನಬಹುದು, ಸೋನಿಯಾ ಗಾಂಧಿ ಕೂಡ ಯಾವತ್ತೂ ತಮ್ಮ ಮಗ ಪ್ರಧಾನಿ ಆಗಲಿ ಎಂದು ಬಹಿರಂಗವಾಗಿ ಹೇಳಿದವರಲ್ಲ.
ಬೇರೆ ಬೇರೆ ಪಕ್ಷಗಳ ಕೆಲ ಮುಖಂಡರು ರಾಹುಲ್ ಪ್ರಧಾನಿಯಾಗಲಿ ಎಂದು ಹೇಳಿದ್ದಾರೆ. ಡಿಎಂಕೆ ಪಕ್ಷದ ಎಂ.ಕೆ. ಸ್ಟಾಲಿನ್, ಆರ್ಜೆಡಿ ಪಕ್ಷದ ತೇಜಸ್ವಿ ಯಾದವ್ ಮೊದಲಾದವರು ರಾಹುಲ್ ಪರ ಬ್ಯಾಟ್ ಬೀಸಿದ್ದರು. ದೇವೇಗೌಡ ಮತ್ತು ಕುಮಾರಸ್ವಾಮಿ ಕೂಡ ರಾಹುಲ್ ಪ್ರಧಾನಿಯಾಗಲಿ ಎಂದು ಇಚ್ಛೆ ತೋರ್ಪಡಿಸಿದ್ದರು. ಈಗ ಈ ಸಾಲಿಗೆ ಪ್ರಿಯಾಂಕ ಸೇರ್ಪಡೆಯಾಗಿದ್ದಾರೆ. ಮಮತಾ ಬ್ಯಾನರ್ಜಿ, ಶರದ್ ಪವಾರ್, ಮಾಯಾವತಿ ಅವರಂತಹ ಕೆಲ ಹಿರಿಯ ಮುಖಂಡರು ಮಾತ್ರ ರಾಹುಲ್ ಪ್ರಧಾನಿಯಾಗುವ ಬಗ್ಗೆ ಉತ್ಸುಕತೆ ತೋರಿಲ್ಲ. ಚುನಾವಣೆ ಮುಗಿದ ಬಳಿಕ ಮೈತ್ರಿ ಪಕ್ಷಗಳು ಪ್ರಧಾನಿಯನ್ನು ಆಯ್ಕೆ ಮಾಡಲಿ ಎಂಬುದು ಅವರ ಅಭಿಪ್ರಾಯವಾಗಿತ್ತು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…