Featured

“ನಾವು ಈ ಲೋಕಸಭೆ ಚುನಾವಣೆ ಗೆಲ್ಲುತ್ತೇವೆ. ರಾಹುಲ್ ಪ್ರಧಾನಿಯಾಗುತ್ತಾರೆ” : ಪ್ರಿಯಾಂಕಾ ಗಾಂಧಿ – Vishwanews24

ಅಮೇಥಿ: ರಾಹುಲ್ ಗಾಂಧಿ ಅವರ ಅಮೇಥಿ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ಪ್ರಿಯಾಂಕಾ ಗಾಂಧಿ ಅವರು ತಮ್ಮ ಅಣ್ಣ ಪ್ರಧಾನಿಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಿನ್ನೆ ಅಮೇಥಿಗೆ ಭೇಟಿ ನೀಡಿದ ಅವರು ಇಂದು ರಾಯ್ ಬರೇಲಿಗೆ ತೆರಳಲಿದ್ದಾರೆ. ಈ ಎರಡು ಕ್ಷೇತ್ರಗಳಲ್ಲಿ ತಳಮಟ್ಟದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸವನ್ನು ಪ್ರಿಯಾಂಕಾ ಮಾಡುತ್ತಿದ್ಧಾರೆ.

“ನಾವು ಈ ಲೋಕಸಭೆ ಚುನಾವಣೆ ಗೆಲ್ಲುತ್ತೇವೆ. ರಾಹುಲ್ ಪ್ರಧಾನಿಯಾಗುತ್ತಾರೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ನೆಹರೂ ಕುಟುಂಬದ ಸದಸ್ಯರೊಬ್ಬರು ರಾಹುಲ್ ಗಾಂಧಿ ಅವರು ಪ್ರಧಾನಿ ಆಗಲಿ ಎಂದು ಹೇಳಿದ್ದು ಇದೇ ಮೊದಲು ಎನ್ನಬಹುದು, ಸೋನಿಯಾ ಗಾಂಧಿ ಕೂಡ ಯಾವತ್ತೂ ತಮ್ಮ ಮಗ ಪ್ರಧಾನಿ ಆಗಲಿ ಎಂದು ಬಹಿರಂಗವಾಗಿ ಹೇಳಿದವರಲ್ಲ.

ಬೇರೆ ಬೇರೆ ಪಕ್ಷಗಳ ಕೆಲ ಮುಖಂಡರು ರಾಹುಲ್ ಪ್ರಧಾನಿಯಾಗಲಿ ಎಂದು ಹೇಳಿದ್ದಾರೆ. ಡಿಎಂಕೆ ಪಕ್ಷದ ಎಂ.ಕೆ. ಸ್ಟಾಲಿನ್, ಆರ್​ಜೆಡಿ ಪಕ್ಷದ ತೇಜಸ್ವಿ ಯಾದವ್ ಮೊದಲಾದವರು ರಾಹುಲ್ ಪರ ಬ್ಯಾಟ್ ಬೀಸಿದ್ದರು. ದೇವೇಗೌಡ ಮತ್ತು ಕುಮಾರಸ್ವಾಮಿ ಕೂಡ ರಾಹುಲ್ ಪ್ರಧಾನಿಯಾಗಲಿ ಎಂದು ಇಚ್ಛೆ ತೋರ್ಪಡಿಸಿದ್ದರು. ಈಗ ಈ ಸಾಲಿಗೆ ಪ್ರಿಯಾಂಕ ಸೇರ್ಪಡೆಯಾಗಿದ್ದಾರೆ. ಮಮತಾ ಬ್ಯಾನರ್ಜಿ, ಶರದ್ ಪವಾರ್, ಮಾಯಾವತಿ ಅವರಂತಹ ಕೆಲ ಹಿರಿಯ ಮುಖಂಡರು ಮಾತ್ರ ರಾಹುಲ್ ಪ್ರಧಾನಿಯಾಗುವ ಬಗ್ಗೆ ಉತ್ಸುಕತೆ ತೋರಿಲ್ಲ. ಚುನಾವಣೆ ಮುಗಿದ ಬಳಿಕ ಮೈತ್ರಿ ಪಕ್ಷಗಳು ಪ್ರಧಾನಿಯನ್ನು ಆಯ್ಕೆ ಮಾಡಲಿ ಎಂಬುದು ಅವರ ಅಭಿಪ್ರಾಯವಾಗಿತ್ತು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago