Featured

ನಾವು ಎಲ್ಲರನ್ನೂ ಒಳಗೊಂಡ ಹಿಂದುತ್ವವನ್ನು ನಂಬುತ್ತೇವೆ , ಆದರೆ ಬಿಜೆಪಿ ವಿಭಜಿತ ಹಿಂದುತ್ವವನ್ನು ಅನುಸರಿಸುತ್ತಿದೆ : ಡಿ.ಕೆ. ಶಿವಕುಮಾರ್ -Vishwanews24

ನಾವು ಎಲ್ಲರನ್ನೂ ಒಳಗೊಂಡ ಹಿಂದುತ್ವವನ್ನು ನಂಬುತ್ತೇವೆ , ಆದರೆ ಬಿಜೆಪಿ ವಿಭಜಿತ ಹಿಂದುತ್ವವನ್ನು ಅನುಸರಿಸುತ್ತಿದೆ : ಡಿ.ಕೆ. ಶಿವಕುಮಾರ್ -Vishwanews24

ಹಿಂದೂ ಮತ್ತು ಹಿಂದೂ ಧರ್ಮ ಯಾರೊಬ್ಬರ ಆಸ್ತಿಯಲ್ಲ. ಇವು ಭಾರತದ ನೀತಿಗಳು ಮತ್ತು ಎಲ್ಲರಿಗೂ ಸೇರಿವೆ”

ಬೆಂಗಳೂರು, : “ಕಾಂಗ್ರೆಸ್‌ ಮಹಾತ್ಮ ಗಾಂಧಿ ಮತ್ತು ಸ್ವಾಮಿ ವಿವೇಕಾನಂದರು ಆಚರಿಸಿದ, ಪ್ರಚಾರ ಮಾಡಿದ ಹಿಂದುತ್ವ ಸಿದ್ಧಾಂತವನ್ನು ದೃಢವಾಗಿ ನಂಬುತ್ತದೆ. ನಾವು ಎಲ್ಲರನ್ನೂ ಒಳಗೊಂಡ ಹಿಂದುತ್ವವನ್ನು ನಂಬುತ್ತೇವೆ” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಸೋಮವಾರ ಪಕ್ಷದ ಹಿರಿಯ ನಾಯಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, “ಮಹಾತ್ಮ ಗಾಂಧಿ ಮತ್ತು ಸ್ವಾಮಿ ವಿವೇಕಾನಂದರು ಎಲ್ಲರನ್ನೂ ಒಳಗೊಂಡ ಹಿಂದುತ್ವವನ್ನು ಪ್ರಚಾರ ಮಾಡಿದರು. ಆದರೆ ಬಿಜೆಪಿ ವಿಭಜಿತ ಹಿಂದುತ್ವವನ್ನು ಅನುಸರಿಸುತ್ತಿದೆ” ಎಂದು ಟೀಕಿಸಿದರು.

ಅಂತರ್‌ ಧರ್ಮೀಯ ವಿವಾಹ ನಿಷೇಧಿಸುವ ಬಗ್ಗೆ ಬಿಜೆಪಿ ಪ್ರಸ್ತಾಪಿಸಿರುವ ಕಠಿಣ ಕಾನೂನಿನ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಹಿಂದೂ ಮತ್ತು ಹಿಂದೂ ಧರ್ಮ ಯಾರೊಬ್ಬರ ಆಸ್ತಿಯಲ್ಲ. ಇವು ಭಾರತದ ನೀತಿಗಳು ಮತ್ತು ಎಲ್ಲರಿಗೂ ಸೇರಿವೆ” ಎಂದು ಹೇಳಿದರು.

“ಸಂವಿಧಾನವನ್ನು ರಕ್ಷಿಸುವುದು ನಮ್ಮ ಬದ್ಧತೆ ಮತ್ತು ನಮ್ಮ ನಿಲುವು” ಎಂದು ಅವರು ಪ್ರತಿಪಾದಿಸಿದರು.”ನಾವು ಕಾಂಗ್ರೆಸ್ ಅನ್ನು ಕಾರ್ಯಕರ್ತರನ್ನು ಆಧಾರಿಸಿರುವ ಪಕ್ಷವನ್ನಾಗಿ ಮಾಡಲು ಯೋಜಿಸುತ್ತಿದ್ದೇವೆ. ಆದ್ದರಿಂದ ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿಯೇ ಬೂತ್ ಮತ್ತು ಪಂಚಾಯತ್ ಮಟ್ಟದ ಸಮಿತಿಗಳನ್ನು ರಚಿಸಲು ನಾವು ಯೋಜಿಸಿದ್ದೇವೆ” ಎಂದು ತಿಳಿಸಿದರು.

”ಮುಂದಿನ ತಿಂಗಳು ನಡೆಯಲಿರುವ ಚುನಾವಣೆಯಲ್ಲಿ ಬಹುಪಾಲು ಜಿಲ್ಲಾ ಪಂಚಾಯತ್‌ಗಳನ್ನು ಗೆಲ್ಲುವ ಪ್ರಬಲ ಪ್ರಯತ್ನದಲ್ಲಿ ಒಂಬತ್ತು ತಂಡಗಳನ್ನು ರಚಿಸಲಾಗುವುದು. ನಮ್ಮ ಎಲ್ಲ ನಾಯಕರು ಈ ತಂಡಗಳಲ್ಲಿ ಮುತುವರ್ಜಿ ವಹಿಸಲಿದ್ದಾರೆ” ಎಂದು ಹೇಳಿದರು.

ಕರ್ನಾಟಕ ರಾಜ್ಯ ಚುನಾವಣಾ ಆಯೋಗ ರಾಜ್ಯದ 5,762 ಗ್ರಾಮ ಪಂಚಾಯಿತಿಗಳಿಗೆ ಎರಡು ಹಂತಗಳಲ್ಲಿ ಡಿಸೆಂಬರ್ 22 ಮತ್ತು 27 ರಂದು ಚುನಾವಣೆ ಘೋಷಿಸಿದ್ದು ಸೋಮವಾರದಿಂದಲ್ಲೇ ನೀತಿ ಸಂಹಿತೆ ಜಾರಿಯಾಗಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

2 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

3 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

3 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

4 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

5 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

5 hours ago