Featured

ನಾವು ಕಾಶ್ಮೀರವನ್ನೇ ಬಿಟ್ಟಿಲ್ಲ ಇನ್ನೂ ಮಂಗಳೂರನ್ನು ಬಿಡುತ್ತೇವಾ? : ಕೆ‌.ಎಸ್‌.ಈಶ್ವರಪ್ಪ -Vishwanews24

ಮಂಗಳೂರು : “ಕಾಂಗ್ರೆಸ್‌ ಮಂಗಳೂರನ್ನು ಗೂಂಡಾ ರಾಜ್ಯವನ್ನಾಗಿ ಮಾಡಲು ಹೊರಟಿದೆ. ಗೂಂಡಾ ರಾಜ್ಯವನ್ನಾಗಿ ಕಾಂಗ್ರೆಸ್‌ ಹಾಗೂ ಖಾದರ್‌ ಅವರ ಈ ಪ್ರಯತ್ನವನ್ನು ನಾವು ವಿಫಲಗೊಳಿಸುತ್ತೇವೆ” ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

ಉಡುಪಿ ಜಿಲ್ಲಾ ಪ್ರವಾಸಕ್ಕೆಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಮಂಗಳೂರಿನ ವಿಷಯದ ಕುರಿತು ಬೇರೆ ಜಿಲ್ಲೆಯವರು ತಲೆ ಹಾಕಬೇಡಿ ಎಂದು ಯುಟಿ ಖಾದರ್‌ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿ , “ಕಾಂಗ್ರೆಸ್‌ ಮಂಗಳೂರನ್ನು ಗೂಂಡಾ ರಾಜ್ಯವನ್ನಾಗಿ ಮಾಡಲು ಹೊರಟಿದೆ. ಅದಕ್ಕಾಗಿ ಖಾದರ್‌ ಈ ರೀತಿ ಹೇಳಿಕೆ ನೀಡುತ್ತಾರೆ. ಕಾಶ್ಮೀರದ ಹಾಗೆಯೇ ಮಂಗಳೂರಿನಲ್ಲಿ 370 ವಿಧಿ ಇದೆಯಾ? ಮಂಗಳೂರು ಅಖಂಡ ಭಾರತದ ಭಾಗವಲ್ಲವೇ? ನಾವು ಕಾಶ್ಮೀರವನ್ನೇ ಬಿಟ್ಟಿಲ್ಲ ಇನ್ನೂ ಮಂಗಳೂರನ್ನು ಬಿಡುತ್ತೇವಾ?” ಎಂದು ಪ್ರಶ್ನಿಸಿದರು.

“ಕರ್ನಾಟಕವನ್ನು ಗೂಂಡಾಗಳು ತಮ್ಮ ರಾಜ್ಯ ಎಂದು ತಿಳಿದು ಕೊಂಡಿದ್ದಾರೆ. ಆದರೆ ನಾವು ಕರ್ನಾಟಕವನ್ನು ಗೂಂಡಾ ರಾಜ್ಯವನ್ನಾಗಿ ಮಾಡಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಸರಕಾರ ಸಾರ್ವಜನಿಕ ಆಸ್ತಿ ನಷ್ಟ ಮಾಡಿದ ಗೂಂಡಾಗಳನ್ನೇ ವೈಯಕ್ತಿಕವಾಗಿ ಹೊಣೆಗಾರನ್ನಾಗಿಸುವ ಚಿಂತನೆ ನಡೆಸಿದೆ” ಎಂದು ತಿಳಿಸಿದರು.

ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ಘೋಷಸಲಾಗಿದ್ದ ಪರಿಹಾರ ತಡೆ ಹಿಡಿದ ವಿಚಾರಕ್ಕೆ ಸಂಬಂಧಿಸಿ, “ಗೋಲಿಬಾರ್‌ನಲ್ಲಿ ಮೃತಪಟ್ಟವರನ್ನು ಅಮಾಯಕರು ಎಂದು ಕರುಣೆಯಿಂದ ಪರಿಹಾರ ಘೋಷಣೆ ಮಾಡಲಾಗಿತ್ತು. ಆದರೆ ತನಿಖೆ ನಡೆಸಿದಾಗ ಅವರ ಮೇಲೆ ಆರೋಪಗಳು ಇರುವುದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಪರಿಹಾರ ವಾಪಾಸ್‌ ತಡೆ ಹಿಡಿಯಲಾಗಿದೆ. ಅವರು ಈ ಪ್ರಕರಣದಲ್ಲಿ ಅಮಾಯಕರು ಎಂದು ಸಾಬೀತು ಆದಲ್ಲಿ ಅವರ ಕುಟುಂಬಕ್ಕೆ ಪರಿಹಾರ ನೀಡಲಾಗುವುದು” ಎಂದು ಆಶ್ವಾಸನೆ ನೀಡಿದರು.

 

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

10 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

10 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

11 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

11 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

11 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

11 hours ago