Featured

ನಾವು ಕಾಶ್ಮೀರವನ್ನೇ ಬಿಟ್ಟಿಲ್ಲ ಇನ್ನೂ ಮಂಗಳೂರನ್ನು ಬಿಡುತ್ತೇವಾ? : ಕೆ‌.ಎಸ್‌.ಈಶ್ವರಪ್ಪ -Vishwanews24

ಮಂಗಳೂರು : “ಕಾಂಗ್ರೆಸ್‌ ಮಂಗಳೂರನ್ನು ಗೂಂಡಾ ರಾಜ್ಯವನ್ನಾಗಿ ಮಾಡಲು ಹೊರಟಿದೆ. ಗೂಂಡಾ ರಾಜ್ಯವನ್ನಾಗಿ ಕಾಂಗ್ರೆಸ್‌ ಹಾಗೂ ಖಾದರ್‌ ಅವರ ಈ ಪ್ರಯತ್ನವನ್ನು ನಾವು ವಿಫಲಗೊಳಿಸುತ್ತೇವೆ” ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

ಉಡುಪಿ ಜಿಲ್ಲಾ ಪ್ರವಾಸಕ್ಕೆಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಮಂಗಳೂರಿನ ವಿಷಯದ ಕುರಿತು ಬೇರೆ ಜಿಲ್ಲೆಯವರು ತಲೆ ಹಾಕಬೇಡಿ ಎಂದು ಯುಟಿ ಖಾದರ್‌ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿ , “ಕಾಂಗ್ರೆಸ್‌ ಮಂಗಳೂರನ್ನು ಗೂಂಡಾ ರಾಜ್ಯವನ್ನಾಗಿ ಮಾಡಲು ಹೊರಟಿದೆ. ಅದಕ್ಕಾಗಿ ಖಾದರ್‌ ಈ ರೀತಿ ಹೇಳಿಕೆ ನೀಡುತ್ತಾರೆ. ಕಾಶ್ಮೀರದ ಹಾಗೆಯೇ ಮಂಗಳೂರಿನಲ್ಲಿ 370 ವಿಧಿ ಇದೆಯಾ? ಮಂಗಳೂರು ಅಖಂಡ ಭಾರತದ ಭಾಗವಲ್ಲವೇ? ನಾವು ಕಾಶ್ಮೀರವನ್ನೇ ಬಿಟ್ಟಿಲ್ಲ ಇನ್ನೂ ಮಂಗಳೂರನ್ನು ಬಿಡುತ್ತೇವಾ?” ಎಂದು ಪ್ರಶ್ನಿಸಿದರು.

“ಕರ್ನಾಟಕವನ್ನು ಗೂಂಡಾಗಳು ತಮ್ಮ ರಾಜ್ಯ ಎಂದು ತಿಳಿದು ಕೊಂಡಿದ್ದಾರೆ. ಆದರೆ ನಾವು ಕರ್ನಾಟಕವನ್ನು ಗೂಂಡಾ ರಾಜ್ಯವನ್ನಾಗಿ ಮಾಡಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಸರಕಾರ ಸಾರ್ವಜನಿಕ ಆಸ್ತಿ ನಷ್ಟ ಮಾಡಿದ ಗೂಂಡಾಗಳನ್ನೇ ವೈಯಕ್ತಿಕವಾಗಿ ಹೊಣೆಗಾರನ್ನಾಗಿಸುವ ಚಿಂತನೆ ನಡೆಸಿದೆ” ಎಂದು ತಿಳಿಸಿದರು.

ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ಘೋಷಸಲಾಗಿದ್ದ ಪರಿಹಾರ ತಡೆ ಹಿಡಿದ ವಿಚಾರಕ್ಕೆ ಸಂಬಂಧಿಸಿ, “ಗೋಲಿಬಾರ್‌ನಲ್ಲಿ ಮೃತಪಟ್ಟವರನ್ನು ಅಮಾಯಕರು ಎಂದು ಕರುಣೆಯಿಂದ ಪರಿಹಾರ ಘೋಷಣೆ ಮಾಡಲಾಗಿತ್ತು. ಆದರೆ ತನಿಖೆ ನಡೆಸಿದಾಗ ಅವರ ಮೇಲೆ ಆರೋಪಗಳು ಇರುವುದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಪರಿಹಾರ ವಾಪಾಸ್‌ ತಡೆ ಹಿಡಿಯಲಾಗಿದೆ. ಅವರು ಈ ಪ್ರಕರಣದಲ್ಲಿ ಅಮಾಯಕರು ಎಂದು ಸಾಬೀತು ಆದಲ್ಲಿ ಅವರ ಕುಟುಂಬಕ್ಕೆ ಪರಿಹಾರ ನೀಡಲಾಗುವುದು” ಎಂದು ಆಶ್ವಾಸನೆ ನೀಡಿದರು.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

9 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

9 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

10 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

11 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

11 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

11 hours ago