Featured

ನಾವು ಗಾಂಧೀಜಿ ಅವರ ಸಂಸ್ಕೃತಿ, ನೆಹರೂ ಅವರ ಸಂಪ್ರದಾಯ ಪಾಲಿಸಿಕೊಂಡು ಬರುತ್ತಿದ್ದೇವೆ , ತ್ರಿವರ್ಣ ಧ್ವಜ ಹಿಡಿಯಲು ನಮಗಿರುವಷ್ಟು ಹಕ್ಕು ಬೇರೆಯವರಿಗಿಲ್ಲ: ಡಿಕೆಶಿ – Vishwanews24

ನಾವು ಗಾಂಧೀಜಿ ಅವರ ಸಂಸ್ಕೃತಿ, ನೆಹರೂ ಅವರ ಸಂಪ್ರದಾಯ ಪಾಲಿಸಿಕೊಂಡು

ಬರುತ್ತಿದ್ದೇವೆ , ತ್ರಿವರ್ಣ ಧ್ವಜ ಹಿಡಿಯಲು ನಮಗಿರುವಷ್ಟು ಹಕ್ಕು ಬೇರೆಯವರಿಗಿಲ್ಲ: ಡಿಕೆಶಿ

ಬೆಂಗಳೂರು: ತ್ರಿವರ್ಣ ಧ್ವಜವನ್ನು ಹಿಡಿಯಲು ನಮಗಿರುವಷ್ಟು ಹಕ್ಕು ಬೇರೆಯವರಿಗಿಲ್ಲ. ನಾವು ಗಾಂಧೀಜಿ ಅವರ ಸಂಸ್ಕೃತಿ, ನೆಹರೂ ಅವರ ಸಂಪ್ರದಾಯ ಪಾಲಿಸಿಕೊಂಡು ಬರುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈಗಿನ ಯಾವುದೇ ಕಾಂಗ್ರೆಸ್ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲಿಲ್ಲ. ಈಗ ಲೂಟಿ ಮಾಡುವವರು ಇದ್ದಾರೆ ಎಂದಿದ್ದ ಹೆಚ್ ಡಿಕೆ ಟೀಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಅವರು ಏನಾದರೂ ಹೇಳಲಿ, ನಾವು ಗಾಂಧೀಜಿ ಅವರ ಸಂಸ್ಕೃತಿ, ನೆಹರೂ ಅವರ ಸಂಪ್ರದಾಯ ಪಾಲಿಸಿಕೊಂಡು ಬರುತ್ತಿದ್ದೇವೆ. ಈ ಧ್ವಜವನ್ನು ಹಿಡಿಯಲು ನಮಗಿರುವಷ್ಟು ಹಕ್ಕು ಬೇರೆಯವರಿಗಿಲ್ಲ ಎಂದರು.

ಇನ್ನು ಆ.15 ರಂದು 1 ಲಕ್ಷ ಜನ ರಾಷ್ಟ್ರಧ್ವಜ ಹಿಡಿದು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೂ ಪಾದಯಾತ್ರೆ ಮಾಡಲಾಗುವುದು. ಇದು ಪಕ್ಷಾತೀತ ಕಾರ್ಯಕ್ರಮವಾಗಿದ್ದು, ಎಲ್ಲ ವರ್ಗದ ಜನರು ಕುಟುಂಬ ಹಾಗೂ ಸ್ನೋಹಿತರ ಸಮೇತ ಭಾಗವಹಿಸಬಹುದು. ಜನರಿಗೆ ಅನುಕೂಲವಾಗುವಂತೆ ರೈಲ್ವೇ, ಬಸ್ ಹಾಗೂ ಮೆಟ್ರೋ ನಿಲ್ದಾಣದ ಬಳಿ ಇರುವ ಕೇಂದ್ರಗಳನ್ನೇ ಈ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಮೆಟ್ರೋ ಪ್ರಯಾಣಿಕರಿಗೆ ಶೇ.50ರಷ್ಟು ರಿಯಾಯಿತಿ ನೀಡಬೇಕು ಎಂದು ಮುಖ್ಯಮಂತ್ರಿಗಳು ಹಾಗೂ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರ ಬಳಿ ಮನವಿ ಮಾಡುತ್ತೇನೆ ಎಂದರು.

ಮಂಗಳೂರು: ಮಕ್ಕಳಲ್ಲಿ ಹೆಚ್ಚುತ್ತಿರುವ ವೈರಲ್ ಜ್ವರ ಮತ್ತು ದೇಹದ ಮೇಲೆ ಗುಳ್ಳೆ..

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

6 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

6 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

6 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago