ಕಾರವಾರ: ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಬಡವರಿಗಾಗಿ. ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕ್ಲಿ ಎಂಬ ಉದ್ದೇಶಕ್ಕೆ ಯೋಜನೆ ಜಾರಿಗೆ ತಂದಿಲ್ಲ ಎಂದು ಸಚಿವ ಮಂಕಾಳು ವೈದ್ಯ ನುಡಿದರು.
ಇಂದು ಕಾರವಾರದಲ್ಲಿ ನಡೆದ ಕೆಡಿಪಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯೋಜನೆ ಕೊಡಬೇಕಾದ್ರೆ ನಮಗೆ ಮತ ಹಾಕಿ ಅಂತಾ ಎಲ್ಲಿಯೂ ಹೇಳಿಲ್ಲ. ನಮ್ಮ ಗ್ಯಾರಂಟಿ ಯೋಜನೆಗೂ, ಚುನಾವಣೆ ಹಿನ್ನೆಡೆಗೂ ಸಂಬಂಧ ಇಲ್ಲ. ನಮ್ಮ ಯೋಜನೆಯಿಂದ ರಾಜ್ಯದ ಕೋಟ್ಯಂತರ ಬಡವರಿಗೆ ಅನುಕೂಲ ಆಗಿರುವ ಬಗ್ಗೆ ಸಂತಸವಿದೆ. ಅದೇ ರೀತಿ ಲೋಕಸಭೆ ಚುನಾವಣೆಯಲ್ಲಿ ಹಿನ್ನೆಡೆ ಆಗಿರುವುದಕ್ಕೆ ಅಸಮಾಧಾನ ಇದೆ. ಇಷ್ಟು ಸಹಾಯ ಮಾಡಿದ್ರೂ ಜನ ನಮಗೆ ಮತ ಹಾಕದಿರುವುದರ ಬಗ್ಗೆ ನೋವು ಇದೆ. ಆದ್ರೆ ಏನ್ ಮಾಡೊಕೆ ಆಗುತ್ತೆ? ಇನ್ನಷ್ಟು ಕೆಲಸ ಮಾಡಿ ಮತ ಸೆಳೆಯುವ ಕೆಲಸ ಮಾಡುತ್ತೇವೆ ಎಂದರು.
ಉತ್ತರಕನ್ನಡ ಕ್ಷೇತ್ರದಲ್ಲಿ ಕಳೆದ ಆರು ಬಾರಿ ಕಾಂಗ್ರೆಸ್ ಗೆ ಹಿನ್ನಡೆ ಆಗಿದೆ. ಈ ಹಿಂದೆಯೂ ಎರಡು ಲಕ್ಷ, ಮೂರು ಲಕ್ಷ ಅಂತರದಲ್ಲಿ ಕಾಂಗ್ರೆಸ್ ಸೋತಿದೆ. ಈ ಹಿಂದೆ ಇದ್ದ ಯಾವ ಸಚಿವರ ತಲೆದಂಡವೂ ಆಗಿಲ್ಲ. ಹಾಗಾಗಿ ಈ ಬಾರಿ ನನ್ನ ತಲೆ ದಂಡ ಆಗುವ ಪ್ರಶ್ನೆಯೇ ಇಲ್ಲ ಎಂದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…