ಕಾರವಾರ: ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಬಡವರಿಗಾಗಿ. ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕ್ಲಿ ಎಂಬ ಉದ್ದೇಶಕ್ಕೆ ಯೋಜನೆ ಜಾರಿಗೆ ತಂದಿಲ್ಲ ಎಂದು ಸಚಿವ ಮಂಕಾಳು ವೈದ್ಯ ನುಡಿದರು.
ಇಂದು ಕಾರವಾರದಲ್ಲಿ ನಡೆದ ಕೆಡಿಪಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯೋಜನೆ ಕೊಡಬೇಕಾದ್ರೆ ನಮಗೆ ಮತ ಹಾಕಿ ಅಂತಾ ಎಲ್ಲಿಯೂ ಹೇಳಿಲ್ಲ. ನಮ್ಮ ಗ್ಯಾರಂಟಿ ಯೋಜನೆಗೂ, ಚುನಾವಣೆ ಹಿನ್ನೆಡೆಗೂ ಸಂಬಂಧ ಇಲ್ಲ. ನಮ್ಮ ಯೋಜನೆಯಿಂದ ರಾಜ್ಯದ ಕೋಟ್ಯಂತರ ಬಡವರಿಗೆ ಅನುಕೂಲ ಆಗಿರುವ ಬಗ್ಗೆ ಸಂತಸವಿದೆ. ಅದೇ ರೀತಿ ಲೋಕಸಭೆ ಚುನಾವಣೆಯಲ್ಲಿ ಹಿನ್ನೆಡೆ ಆಗಿರುವುದಕ್ಕೆ ಅಸಮಾಧಾನ ಇದೆ. ಇಷ್ಟು ಸಹಾಯ ಮಾಡಿದ್ರೂ ಜನ ನಮಗೆ ಮತ ಹಾಕದಿರುವುದರ ಬಗ್ಗೆ ನೋವು ಇದೆ. ಆದ್ರೆ ಏನ್ ಮಾಡೊಕೆ ಆಗುತ್ತೆ? ಇನ್ನಷ್ಟು ಕೆಲಸ ಮಾಡಿ ಮತ ಸೆಳೆಯುವ ಕೆಲಸ ಮಾಡುತ್ತೇವೆ ಎಂದರು.
ಉತ್ತರಕನ್ನಡ ಕ್ಷೇತ್ರದಲ್ಲಿ ಕಳೆದ ಆರು ಬಾರಿ ಕಾಂಗ್ರೆಸ್ ಗೆ ಹಿನ್ನಡೆ ಆಗಿದೆ. ಈ ಹಿಂದೆಯೂ ಎರಡು ಲಕ್ಷ, ಮೂರು ಲಕ್ಷ ಅಂತರದಲ್ಲಿ ಕಾಂಗ್ರೆಸ್ ಸೋತಿದೆ. ಈ ಹಿಂದೆ ಇದ್ದ ಯಾವ ಸಚಿವರ ತಲೆದಂಡವೂ ಆಗಿಲ್ಲ. ಹಾಗಾಗಿ ಈ ಬಾರಿ ನನ್ನ ತಲೆ ದಂಡ ಆಗುವ ಪ್ರಶ್ನೆಯೇ ಇಲ್ಲ ಎಂದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…