ಬೆಂಗಳೂರು: ನಿರೀಕ್ಷಿತ ಮಟ್ಟಕ್ಕೆ ಫಲಿತಾಂಶ ಬರದೇ ಇದ್ದದ್ದು ಬೇಸರ ತರಿಸಿದೆ. ಈ ಸೋಲಿಗೆ ಯಾರನ್ನೂ ದೂರುವುದಕ್ಕೆ ಆಗಲ್ಲ. ಈ ಬಾರಿ ಆದ ನಮ್ಮ ಲೋಪದೋಷ ಸರಿಪಡಿಸಿಕೊಳ್ಳುತ್ತೇವೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ದೇವೇಗೌಡ ನಿವಾಸದಲ್ಲಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿದರು. “ರಾಜಕೀಯದಲ್ಲಿ ಸೋಲು-ಗೆಲುವು ಎನ್ನುವುದು ಸಾಮಾನ್ಯ. ಗೆದ್ದಾಗ ಬೀಗುವುದಿಲ್ಲ. ಸೋತಾಗ ಮೂಲೆ ಸೇರಿಕೊಳ್ಳಲ್ಲ. ಈ ಬಾರಿಯ ಚುನಾವಣೆಯಲ್ಲಿ ನಮ್ಮಿಂದಲೇ ತಪ್ಪಾಗಿರಬಹುದು. ಅದನನ್ನು ನಾವು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳುತ್ತೇವೆ ಎಂದು ಹೇಳಿದರು.
ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಜೆಡಿಎಸ್ ಸೋಲು ಅನುಭವಿಸಿದ ವಿಚಾರವಾಗಿ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯೆ ನೀಡಿದರು. ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಮತ ಬಿಜೆಪಿಗೆ ಶಿಫ್ಟ್ ಆಗಿದೆ. ನಮ್ಮ ಜೆಡಿಎಸ್ ಮತವನ್ನು ನಾವು ಪಡೆದುಕೊಂಡಿದ್ದೇವೆ. ಕಾಂಗ್ರೆಸ್ ಮತಗಳು ಬಿಜೆಪಿಗೆ ಹೋಗಿದೆ ಅಷ್ಟೆ ಎಂದರು.
ಸಾಮಾನ್ಯ ಚುನಾವಣೆಯೇ ಬೇರೆ. ಉಪ ಚುನಾವಣೆಯೇ ಬೇರೆ. ನಾವು ಮುಂದಿನ ದಿನ ಕಾರ್ಯಕರ್ತರ ಜೊತೆ ಕೂತು ಚರ್ಚಿಸುತ್ತೇವೆ. ಚರ್ಚಿಸಿ ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತೇವೆ ಎಂದು ಪ್ರಜ್ವಲ್ ಹೇಳಿದರು.
ಹುಣಸೂರಲ್ಲಿ ಮತ್ತೊಮ್ಮೆ ಜೆಡಿಎಸ್ ಬಾವುಟ ಹಾರಿಸುತ್ತೇವೆ. ನಾವು ತಡವಾಗಿ ಚುನಾವಣಾ ಪ್ರಚಾರಕ್ಕೆ ಹೋಗಿದ್ದರಿಂದ ಸೋಲಾಗಿದೆ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…