ಡಿಸ್ಪುರ್: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ‘ಅಶ್ಲೀಲ ವಿಡಿಯೋ’ ಪ್ರಕರಣ ಸಂಬಂಧ ಇದೇ ಮೊದಲ ಬಾರಿಗೆ ಗುವಾಹಟಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ.
ಗುವಾಹಟಿಯಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಇದೊಂದು ಬಹಳ ಆಘಾತಕಾರಿ ಘಟನೆಯಾಗಿದೆ. ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ. ನಾವು ದೇಶದ ‘ಮಾತೃಶಕ್ತಿ’ ಜೊತೆ ನಿಲ್ಲುತ್ತೇವೆ. ಈ ವಿಚಾರದಲ್ಲಿ ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ನಾನು ಕಾಂಗ್ರೆಸ್ ಸರ್ಕಾರವನ್ನು ಕೇಳಲು ಬಯಸುತ್ತೇನೆ. ಕರ್ನಾಟಕದಲ್ಲಿ ಯಾರ ಸರ್ಕಾರವಿದೆ? ಅವರ್ಯಾಕೆ ಇದುವರೆಗೆ ಕ್ರಮ ಕೈಗೊಂಡಿಲ್ಲ?. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಾಗಿದೆ ಎಂದರು.
ನಾವು ತನಿಖೆಯ ಪರವಾಗಿದ್ದೇವೆ, ತನಿಖೆ ನಡೆಯಲಿ. ಇದು ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯ, ಹೀಗಾಗಿ ನಾವು ಈ ಬಗ್ಗೆ ಕ್ರಮ ಕೈಗೊಳ್ಳಲು ಆಗಲ್ಲ. ನಮ್ಮ ಮೈತ್ರಿ ಪಕ್ಷ ಜೆಡಿಎಸ್ ಕೂಡ ಇದರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಇಂದು ಅವರ ಕೋರ್ ಕಮಿಟಿ ಸಭೆ ಇದ್ದು, ಕ್ರಮಕೈಗೊಳ್ಳಲಿದ್ದಾರೆ ಎಂದು ಅಮಿತ್ ಶಾ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…