Featured

ನಾವು ತನಿಖೆಯ ಪರವಾಗಿದ್ದೇವೆ , ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ : ಪ್ರಜ್ವಲ್‌ ಬಗ್ಗೆ ಅಮಿತ್‌ ಶಾ ಪ್ರತಿಕ್ರಿಯೆ – Vishwanews24

ನಾವು ತನಿಖೆಯ ಪರವಾಗಿದ್ದೇವೆ , ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ : ಪ್ರಜ್ವಲ್‌ ಬಗ್ಗೆ ಅಮಿತ್‌ ಶಾ ಪ್ರತಿಕ್ರಿಯೆ

ಡಿಸ್ಪುರ್: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ‘ಅಶ್ಲೀಲ ವಿಡಿಯೋ’ ಪ್ರಕರಣ ಸಂಬಂಧ ಇದೇ ಮೊದಲ ಬಾರಿಗೆ ಗುವಾಹಟಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ  ಪ್ರತಿಕ್ರಿಯೆ ನೀಡಿದ್ದಾರೆ.

ಗುವಾಹಟಿಯಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಇದೊಂದು ಬಹಳ ಆಘಾತಕಾರಿ ಘಟನೆಯಾಗಿದೆ. ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ. ನಾವು ದೇಶದ ‘ಮಾತೃಶಕ್ತಿ’ ಜೊತೆ ನಿಲ್ಲುತ್ತೇವೆ. ಈ ವಿಚಾರದಲ್ಲಿ ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ನಾನು ಕಾಂಗ್ರೆಸ್  ಸರ್ಕಾರವನ್ನು ಕೇಳಲು ಬಯಸುತ್ತೇನೆ. ಕರ್ನಾಟಕದಲ್ಲಿ ಯಾರ ಸರ್ಕಾರವಿದೆ? ಅವರ್ಯಾಕೆ ಇದುವರೆಗೆ ಕ್ರಮ ಕೈಗೊಂಡಿಲ್ಲ?. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಾಗಿದೆ ಎಂದರು.

ನಾವು ತನಿಖೆಯ ಪರವಾಗಿದ್ದೇವೆ, ತನಿಖೆ ನಡೆಯಲಿ. ಇದು ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯ, ಹೀಗಾಗಿ ನಾವು ಈ ಬಗ್ಗೆ ಕ್ರಮ ಕೈಗೊಳ್ಳಲು ಆಗಲ್ಲ. ನಮ್ಮ ಮೈತ್ರಿ ಪಕ್ಷ ಜೆಡಿಎಸ್ ಕೂಡ ಇದರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಇಂದು ಅವರ ಕೋರ್ ಕಮಿಟಿ ಸಭೆ ಇದ್ದು, ಕ್ರಮಕೈಗೊಳ್ಳಲಿದ್ದಾರೆ ಎಂದು ಅಮಿತ್‌ ಶಾ ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

7 minutes ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

20 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

21 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

21 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago