Featured

‘ನಾವು ನಾಲ್ವರೂ  ಸಾಯುತ್ತೇವೆಂದು ಫೇಸ್ಬುಕ್ ಲೈವ್‌ : ನಿಜವಾಯಿತು ತಮಾಷೆಗೆ ಹೇಳಿದ ಮಾತು ; ರಸ್ತೆ ಅಪಘಾತದಲ್ಲಿ ನಾಲ್ವರ ದುರ್ಮರಣ – Vishwanews24

ನಾವು ನಾಲ್ವರೂ  ಸಾಯುತ್ತೇವೆಂದು ಫೇಸ್ಬುಕ್ ಲೈವ್‌ : ನಿಜವಾಯಿತು ತಮಾಷೆಗೆ ಹೇಳಿದ ಮಾತು ; ರಸ್ತೆ ಅಪಘಾತದಲ್ಲಿ ನಾಲ್ವರ ದುರ್ಮರಣ

ಸುಲ್ತಾನ್‌ಪುರ: ಸುಲ್ತಾನ್‌ಪುರದ ಬಳಿ ಕಳೆದ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ನಾಲ್ವರು ತಮ್ಮ ಸಾವಿನ ಕುರಿತು ಫೇಸ್ಬುಕ್‌ನಲ್ಲಿ ಕೆಲವು ಕ್ಷಣಗಳ ಹಿಂದಷ್ಟೇ ಲೈವ್‌ ಮಾಡಿ ಹೇಳಿದ್ದರು! ಆದರೆ ತಮಾಷೆಗಾಗಿ ಆಡಿದ ಮಾತು ನಿಜವೇ ಆಗಿ ಬಿಡುತ್ತದೆ ಎಂಬುದು ಅವರಾರಿಗೂ ತಿಳಿದಿರಲಿಲ್ಲ.

ಸುಲ್ತಾನ್ ಪುರದ ಬಳಿ ಪೂರ್ವಾಚಲ್ ಎಕ್ಸ್ ಪ್ರೆಸ್ ವೇನಲ್ಲಿ ಕಳೆದ ಶುಕ್ರವಾರ ಬಿಎಂಡಬ್ಲ್ಯೂ ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಟೆಕ್ಕಿ, ವೈದ್ಯ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರು.

ಬಿಹಾರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕ ಡಾ. ಆನಂದ ಪ್ರಕಾಶ್ ದೆಹಲಿಯ ಖಾಸಗಿ ಶಿಕ್ಷಣ ಸಂಸ್ಥೆಯ ಮಾಲಕರೊಬ್ಬರಿಂದ ಇತ್ತೀಚೆಗಷ್ಟೇ ಐಷಾರಾಮಿ ಬಿಎಂಡಬ್ಲ್ಯೂ ಕಾರು ಖರಿಈದಿಸಿದ್ದು, ಇದೇ ಕಾರಿನಲ್ಲಿ ಸ್ನೇಹಿತರಾದ ದೀಪಕ್ ಕುಮಾರ್, ಅಖಿಲೇಶ್ ಸಿಂಗ್ ಹಾಗೂ ಮುಕೇಶ್ ಎಂಬವರೊಂದಿಗೆ ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದರು. ಈ ವೇಳೆ ನಾಲ್ವರೂ ಕಾರಿನಲ್ಲಿ ಪ್ರಯಾಣಿಸುತ್ತಲೇ ಫೇಸ್ಬುಕ್ ಲೈವ್ ಮಾಡಿದ್ದು, ನಮ್ಮ ಕಾರು 230 ಕಿಲೋಮೀಟರ್ ವೇಗದಲ್ಲಿ ಹೋಗುತ್ತಿದ್ದು, ಸ್ವಲ್ಪ ಹೊತ್ತಿನಲ್ಲಿ ಇದು 300 ಕಿಲೋ ಮೀಟರ್ ತಲುಪಲಿದೆ ಎಂದಿದ್ದರು.

ಪರೇಶ್ ಮೆಸ್ತಾ’ ಹತ್ಯೆ ಕೇಸ್ ರೀ ಓಪನ್ ಗೆ ರಾಜ್ಯ ಸರ್ಕಾರಕ್ಕೆ ಹೆಚ್ಚಿದ ಒತ್ತಡ – Vishwanews24

ಈ ವೇಳೆ ಓರ್ವ ಪ್ರಯಾಣಿಕರ ಇನ್ನೂ ವೇಗದಲ್ಲಿ ಹೋದರೆ ನಾವು ನಾಲ್ವರೂ ಸಾಯುತ್ತೇವೆ ಎಂದು ತಮಾಷೆಗಾಗಿ ಹೇಳಿದ್ದ. ಆದರೆ ಈ ತಮಾಷೆಯ ಮಾತೇ ನಿಜವಾಗಿದ್ದು, ಕೆಲವೇ ಕ್ಷಣಗಳಲ್ಲಿ ಇವರಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ನಾಲ್ವರೂ ಮೃತಪಟ್ಟಿದ್ದಾರೆ.

 

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago