ಗುವಾಹಟಿ,: “ನಾವು ಬಿಜೆಪಿಯವರ ರೀತಿಯಲ್ಲ. ನಾವು ಚುನಾವಣೆಯ ಸಂದರ್ಭ ನೀಡಿದ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತೇವೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಗುವಾಹಟಿಯ ಕಾಮುಖ್ಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಚುನಾವಣೆಯ ಪ್ರಚಾರದ ಸಂದರ್ಭ ಐದು ಭರವಸೆಗಳನ್ನು ನೀಡುತ್ತಿದ್ದೇವೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಆ ಭರವಸೆಗಳನ್ನು ಈಡೇರಿಸುತ್ತೇವೆ. ಚುನಾವಣೆ ವೇಳೆ ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸುತ್ತದೆ” ಎಂದಿದ್ದಾರೆ..
ಇದನ್ನೂ ಓದಿ : ತಂದೆ-ತಾಯಿ ಆರಾಮಗಿದ್ದಾರೆ. ಆತಂಕ ಪಡುವ ಆಗತ್ಯವಿಲ್ಲ : ಹೆಚ್. ಡಿ ಕುಮಾರಸ್ವಾಮಿ -Vishwanews24
“ಕರ್ನಾಟಕ ಸೇರಿದಂತೆ ಪಂಜಾಬ್ ಹಾಗೂ ಛತ್ತೀಸ್ಗಡದಲ್ಲಿ ರೈತರ ಸಾಲ ಮಾಡುವ ಭರವಸೆಯನ್ನು ಕಾಂಗ್ರೆಸ್ ನೀಡುತ್ತಿದ್ದು, ಅಸ್ಸಾಂನಲ್ಲಿ ಚಹಾ ತೋಟ ಕಾರ್ಮಿಕರ ದಿನಗೂಲಿಯನ್ನು ಹೆಚ್ಚಿಸುವ ಭರವಸೆಯನ್ನು ನೀಡಿದ್ದೇವೆ. ಈ ಭರವಸೆಯನ್ನು ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಈಡೇರಿಸಲಿದೆ” ಎಂದು ಹೇಳಿದ್ದಾರೆ.
ಅಸ್ಸಾಂನಲ್ಲಿ ಸಿಎಎ ಕಾಯ್ದೆಯನ್ನು ಜಾರಿಗೆ ತರಲು ಬಿಡುವುದಿಲ್ಲ. ಐದು ಲಕ್ಷ ಯುವಕರಿಗೆ ಉದ್ಯೋಗ ನೀಡುವುದು, ರಾಜ್ಯದಲ್ಲಿನ ಪ್ರತೀ ಮನೆಗೆ ತಿಂಗಳಿಗೆ 200 ಯುನಿಟ್ ವಿದ್ಯುತ್, ಗೃಹಿಣಿಯರಿಗೆ ಮಾಸಿಕ ನೆರವು ಒದಗಿಸುವ ಭರಸೆಯನ್ನು ನೀಡಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…