ನಾವು ಭಾರತ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿಸಲು ಬಿಡುವುದಿಲ್ಲ : ಸಿದ್ದರಾಮಯ್ಯ -Vishwanews24

ಬೆಂಗಳೂರು: ಭಾರತ ಒಂದು ಜಾತ್ಯಾತೀತ ರಾಷ್ಟ್ರವಾಗಿದ್ದು ಅದನ್ನು ಹಿಂದೂ ರಾಷ್ಟ್ರವನ್ನಾಗಿಸಲು ಬಿಡುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಿಎಎ ಮತ್ತು ಎನ್‍.ಆರ್.ಸಿ ಕಾರ್ಯಾಗಾರದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಪೌರತ್ವ ಕಾಯ್ದೆ, ಎನ್.ಪಿ.ಆರ್, ಎನ್‍.ಆರ್.ಸಿ ಎಲ್ಲವೂ ಒಂದೇ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಮೋದಿ ಈ ಬಗ್ಗೆ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ಎನ್‍ಪಿಆರ್ ಹಿಂದೆ ರಾಕ್ಷಸಿ ಉದ್ದೇಶವಿದೆ. ಸಂವಿಧಾನ ವಿರೋಧಿ ಕಾಯ್ದೆ ಇದಾಗಿದೆ. ಅಕ್ರಮ ವಲಸಿಗರನ್ನು ಸಕ್ರಮ ಗೊಳಿಸಲು ನಮ್ಮ ವಿರೋಧ ಇಲ್ಲ. ಆದರೆ ಮುಸ್ಲಿಮರನ್ನು ಹೊರಗಿಟ್ಟಿರುವುದು ಯಾಕೆ? ಮುಸ್ಲಿಮರೂ ನಮ್ಮ ದೇಶಕ್ಕೆ ಬಂದಿದ್ದಾರೆ. ಬಾಂಗ್ಲಾ, ಪಾಕಿಸ್ತಾನ, ಅಫ್ಘಾನಿಸ್ಥಾನ ಬಿಟ್ಟು ಇತರ ನೆರೆ ರಾಜ್ಯಗಳಿಂದಲೂ ಹಲವರು ವಲಸೆ ಬಂದಿದ್ದಾರೆ. ಅವರನ್ನು ಏಕೆ ಕಾಯ್ದೆಯಿಂದ ಹೊರಗಿಡಲಾಗಿದೆ ಎಂದು ಪ್ರಶ್ನಿಸಿದರು.

ನಿಮ್ಮ ಉದ್ದೇಶ ದೇಶವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂಬುದು ಅಷ್ಟೇ. ಇದು ಬಿಜೆಪಿಯ ಹಿಡನ್ ಅಜೆಂಡಾ ಆಗಿದೆ. ಜಾತ್ಯಾತೀತತೆ ಸಂವಿಧಾನದ ಮೂಲ ಆಶಯವಾಗಿದ್ದು ಅದನ್ನು ಉಲ್ಲಂಘಿಸಲಾಗುತ್ತಿದೆ. ಬಹುಮತ ಇರುವ ಪಕ್ಷ ಕಾನೂನು ಮಾಡಲಿ, ಆದರೆ ಅದು ನ್ಯಾಯಬದ್ಧ ಇಲ್ಲವಾದರೆ ಅದನ್ನು ವಿರೋಧಿಸಿ ಎಂದು ಗಾಂಧೀಜಿ ಹೇಳಿದ್ದರು. ಈ ಕಾಯ್ದೆ ನಮಗೆ ಬೇಕಾಗಿದೆಯಾ? ದೇಶದಲ್ಲಿ ಸಮಾಜ ಕಿತ್ತು ತಿನ್ನುವ ಸಮಸ್ಯೆಗಳಿದ್ದು ಈ ಬಗ್ಗೆ ನೀವು ಮಾತನಾಡುತ್ತಿಲ್ಲ ಎಂದು ಬಿಜೆಪಿಯವರನ್ನು ತರಾಟೆಗೆ ತೆಗೆದುಕೊಂಡರು.

 

ಪ್ರಣಾಳಿಕೆಯಲ್ಲೇ ನೀವು ಎನ್‍.ಆರ್.ಸಿ ತರುತ್ತೇವೆ ಎಂದು ಹೇಳಿದ್ದು ಅದಕ್ಕೆ ತಂದಿದ್ದೀರ. ಬೇರೆ ವಿಚಾರ ಬಗ್ಗೆಯೂ ಪ್ರಣಾಳಿಕೆಯನ್ನು ಹೇಳಿದ್ದೀರಿ. ಅದನ್ನು ಏಕೆ ಜಾರಿ ಮಾಡುತ್ತಿಲ್ಲ? ಬಹುಮತ ಇದ್ದರೂ ಜನವಿರೋಧಿ ಕಾನೂನು ತರಬಾರದು. ಅದು ಪ್ರಜಾಪ್ರಭುತ್ವ. ಇದನ್ನು ನಾವು ವಿರೋಧ ಮಾಡಲೇ ಬೇಕು ಎಂದರು.

ಕೇಂದ್ರ ಸರ್ಕಾರ ತಂದಿರುವ ಕಾನೂನು ಸಂವಿಧಾನ ವಿರೋಧಿ ಮಾತ್ರವಲ್ಲ, ಮಾನವೀಯತೆಯ ವಿರೋಧಿ ಆಗಿದೆ. ಮನುಷ್ಯತ್ವದ ವಿರೋಧಿಯಾಗಿದೆ. ಈ ಕಾಯ್ದೆಯಿಂದ ಎಲ್ಲರಿಗೂ ಅನ್ಯಾಯವಾಗುತ್ತದೆ. ದಲಿತರಿಗೆ, ಆದಿವಾಸಿಗಳಿಗೆ ಎಲ್ಲರಿಗೂ ಅನ್ಯಾಯ ಆಗುತ್ತದೆ. ರೈತರು, ನಿರುದ್ಯೋಗಿಗಳು ಆತ್ಮಹತ್ಯೆ ಮಾಡುತ್ತಿದ್ದಾರೆ. ಅದರ ಬಗ್ಗೆ ನೋಡಿಯೇ ನಾವು ದೇಶವನ್ನು ಹಿಂದೂ ರಾಷ್ಟ್ರ ಆಗಲು ಬಿಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago