ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ, ಆಗ ಬಡವರಿಗೆ 10 ಕೆ.ಜಿ ಅಕ್ಕಿ ಕೊಡುತ್ತೇವೆ : ಸಿದ್ದರಾಮಯ್ಯ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: “ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಆಗ ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 10 ಕೆ.ಜಿ. ಅಕ್ಕಿ ಕೊಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ”ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಉಪಚುನಾವಣೆ ಘೋಷಣೆಯಾಗಿದೆ, ಫಲಿತಾಂಶದ ಬಳಿಕ “ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಆಗ ಬಡವರಿಗೆ 10 ಕೆ.ಜಿ ಅಕ್ಕಿ ಕೊಡುತ್ತೇವೆ. ರಾಜಕಾರಣ ಜನಸೇವೆಗೆ ಇರುವ ಸಾಧನ ಅಂತ ನಂಬಿದವರು ನಾವು. ಹಣ-ಅಧಿಕಾರದ ಸ್ವಾರ್ಥ ಸಾಧನೆಗಾಗಿ ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸುವವರಿಗೆ ಜನ ಮತ ನೀಡಬಾರದು” ಎಂದು ಹೇಳಿದ್ದಾರೆ.