Featured

ನಾವು ಮತ್ತೊಮ್ಮೆ ನಮ್ಮ ಸೈನಿಕರಿಗಾಗಿ ಅಮರ್ ಜವಾನ್ ಜ್ಯೋತಿಯನ್ನು ಬೆಳಗಿಸುತ್ತೇವೆ : ರಾಹುಲ್ ಗಾಂಧಿ – Vishwanews24

ನಮ್ಮ ವೀರ ಸೈನಿಕರಿಗಾಗಿ ಉರಿಯುತ್ತಿದ್ದ ಅಮರ ಜ್ವಾಲೆ ಇಂದು ನಂದಿಸಲಾಗುತ್ತಿರುವುದು ಅತ್ಯಂತ ದುಃಖದ ಸಂಗತಿ..

ಕೆಲವರಿಗೆ ದೇಶಭಕ್ತಿ ಮತ್ತು ತ್ಯಾಗವನ್ನು ಅರ್ಥವಾಗುವುದಿಲ್ಲ..

ನವದೆಹಲಿ: ರಾಷ್ಟ್ರರಾಜಧಾನಿಯ ಅಪ್ರತಿಮ ಹೆಗ್ಗುರುತಾಗಿರುವ ಇಂಡಿಯಾ ಗೇಟ್ ಹುಲ್ಲುಹಾಸಿನಲ್ಲಿ 50 ವರ್ಷಗಳಿಂದ ಉರಿಯುತ್ತಿರುವ ಅಮರ್ ಜವಾನ್ ಜ್ಯೋತಿಯ ಜ್ವಾಲೆಯು ಶಾಶ್ವತವಾಗಿ ನಂದಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದುಃಖ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ರಾಹುಲ್ ಗಾಂಧಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ನಮ್ಮ ವೀರ ಸೈನಿಕರಿಗಾಗಿ ಉರಿಯುತ್ತಿದ್ದ ಅಮರ ಜ್ವಾಲೆ ಇಂದು ನಂದಿಸಲಾಗುತ್ತಿರುವುದು ಅತ್ಯಂತ ದುಃಖದ ಸಂಗತಿ. ಕೆಲವರಿಗೆ ದೇಶಭಕ್ತಿ ಮತ್ತು ತ್ಯಾಗವನ್ನು ಅರ್ಥವಾಗುವುದಿಲ್ಲ. ಆದರೂ ಪರವಾಗಿಲ್ಲ ನಾವು ಮತ್ತೊಮ್ಮೆ ನಮ್ಮ ಸೈನಿಕರಿಗಾಗಿ ಅಮರ್ ಜವಾನ್ ಜ್ಯೋತಿಯನ್ನು ಬೆಳಗಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಇಂಡಿಯಾ ಗೇಟ್‍ನಿಂದ 400 ಮೀಟರ್ ದೂರದಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಅಮರ್ ಜವಾನ್ ಜ್ಯೋತಿಯ ಜ್ವಾಲೆಯನ್ನು ನಂದಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1972ರ ಜನವರಿ 26 ರಂದು ಅಮರ್ ಜವಾನ್ ಜ್ಯೋತಿಯನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಉದ್ಘಾಟಿಸಿದ್ದರು. ಸ್ವಾತಂತ್ರ್ಯದ ನಂತರ ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ವೀರ ಯೋಧರ ಮತ್ತು ಹುತಾತ್ಮರ ಸ್ಮಾರಕವಾಗಿದೆ. ಸ್ಮಾರಕದಲ್ಲಿರುವ ಗ್ರಾನೈಟ್ ಫಲಕಗಳ ಮೇಲೆ 25,942 ಸೈನಿಕರ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಕೆತ್ತಲಾಗಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

5 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

5 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

5 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

5 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

7 hours ago