ಉಡುಪಿ: ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದ ಈಶ್ವರಪ್ಪ ಈಗ ಮಂತ್ರಿಯಾಗಿದ್ದಾರೆ. ಅವರಿಗಿಂತ ರಾಜಕೀಯದಲ್ಲಿ ಕಿರಿಯರು ಇದೀಗಲೇ ಡಿಸಿಎಂ ಆಗಿದ್ದು ಸಚಿವ ಈಶ್ವರಪ್ಪರಿಗೆ ಸ್ವಾಭಿಮಾನ ಇಲ್ಲ ಒಂದು ವೇಳೆ ಸ್ವಾಭಿಮಾನಿ ಆಗಿದ್ದರೆ ಮಂತ್ರಿ ಆಗಬಾರದಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗುಡುಗಿದ್ದಾರೆ.
ಅವರು ಉಡುಪಿ ನಗರದ ಅಜ್ಜರಕಾಡಿನ ಪುರಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ದಲ್ಲಿ ಪಾಲ್ಗೊಳ್ಳಲು ಆಗಮಿಸಿದ ದಿನೇಶ್ ಗುಂಡೂರಾವ್ ಸುದ್ದಿಗಾರರೊಂದಿಗೆ ಮಾತನಾಡಿದರು. ಈಶ್ವರಪ್ಪನಿಗೆ ಯಾವುದೇ ಬದ್ಧತೆ ಇಲ್ಲ. ಅಹಿಂದ ಪರ ಒಂದೇ ಒಂದು ಹೋರಾಟ ಮಾಡಿದ ಇತಿಹಾಸವಿಲ್ಲ. ಈಶ್ವರಪ್ಪನಿಗೆ ಗಂಭೀರತೆಯಿಲ್ಲ ಅವರು ಗಹನವಾಗಿ ಮಾತನಾಡಲ್ಲ ಎಂದರು.
ಬಿಜೆಪಿ, ಜೆಡಿಎಸ್ ಉಪಚುನಾವಣೆ ಒಳ ಒಪ್ಪಂದ ವಿಚಾರದಲ್ಲಿ ದೇವೇಗೌಡ ಮತ್ತು ಯಡಿಯೂರಪ್ಪ ಇವರಲ್ಲಿ ಯಾರು ಸತ್ಯ ಮಾತನಾಡುತ್ತಾರೆ ಯಾರು ಸುಳ್ಳು ಹೇಳುತ್ತಾರೆ ಗೊತ್ತಾಗುವುದಿಲ್ಲ. ಈ ಗೊಂದಲ ಸೃಷ್ಟಿ ಮಾಡಿದ್ದು ಜೆಡಿಎಸ್ ಪಕ್ಷದವರು. ಕುಮಾರಸ್ವಾಮಿ ಹೇಳಿಕೆ ಗಳು ಅವಮಾನಕ್ಕೆ ಕಾರಣವಾಗಿವೆ. ಮುಂದೆ ಏನು ಮಾಡುತ್ತಾರೊ ಅದು ಅವರಿಗೆ ಬಿಟ್ಟದ್ದು. ನಾವು ಮಾತ್ರ ಬಿಜೆಪಿ ವಿರುದ್ಧ ನಿರಂತರ ಹೋರಾಟ ಮಾಡುತ್ತೇವೆ ಎಂದರು.
ಜೆಡಿಎಸ್ ಪಕ್ಷಕ್ಕೆ ಒಂದು ಸ್ಪಷ್ಟವಾದ ನಿಲುವು, ಸಿದ್ಧಾಂತವೇ ಇಲ್ಲ. ಜೆಡಿಎಸ್ ಒಮ್ಮೆ ಯಾರೊಂದಿಗೂ ಸ್ನೇಹ ಬೆಳೆಸುತ್ತಾರೆ, ಇನ್ನೊಮ್ಮೆ ಯಾರೊಂದಿಗೂ ದ್ವೇಷ ಸಾಧಿಸುತ್ತಾರೆ. ಸಹಾಯ ಮಾಡಿದವರ ಜೊತೆ ಹೋಗುವ ಪಾರ್ಟಿ ಅದು ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…