ಉಡುಪಿ: ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದ ಈಶ್ವರಪ್ಪ ಈಗ ಮಂತ್ರಿಯಾಗಿದ್ದಾರೆ. ಅವರಿಗಿಂತ ರಾಜಕೀಯದಲ್ಲಿ ಕಿರಿಯರು ಇದೀಗಲೇ ಡಿಸಿಎಂ ಆಗಿದ್ದು ಸಚಿವ ಈಶ್ವರಪ್ಪರಿಗೆ ಸ್ವಾಭಿಮಾನ ಇಲ್ಲ ಒಂದು ವೇಳೆ ಸ್ವಾಭಿಮಾನಿ ಆಗಿದ್ದರೆ ಮಂತ್ರಿ ಆಗಬಾರದಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗುಡುಗಿದ್ದಾರೆ.
ಅವರು ಉಡುಪಿ ನಗರದ ಅಜ್ಜರಕಾಡಿನ ಪುರಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ದಲ್ಲಿ ಪಾಲ್ಗೊಳ್ಳಲು ಆಗಮಿಸಿದ ದಿನೇಶ್ ಗುಂಡೂರಾವ್ ಸುದ್ದಿಗಾರರೊಂದಿಗೆ ಮಾತನಾಡಿದರು. ಈಶ್ವರಪ್ಪನಿಗೆ ಯಾವುದೇ ಬದ್ಧತೆ ಇಲ್ಲ. ಅಹಿಂದ ಪರ ಒಂದೇ ಒಂದು ಹೋರಾಟ ಮಾಡಿದ ಇತಿಹಾಸವಿಲ್ಲ. ಈಶ್ವರಪ್ಪನಿಗೆ ಗಂಭೀರತೆಯಿಲ್ಲ ಅವರು ಗಹನವಾಗಿ ಮಾತನಾಡಲ್ಲ ಎಂದರು.
ಬಿಜೆಪಿ, ಜೆಡಿಎಸ್ ಉಪಚುನಾವಣೆ ಒಳ ಒಪ್ಪಂದ ವಿಚಾರದಲ್ಲಿ ದೇವೇಗೌಡ ಮತ್ತು ಯಡಿಯೂರಪ್ಪ ಇವರಲ್ಲಿ ಯಾರು ಸತ್ಯ ಮಾತನಾಡುತ್ತಾರೆ ಯಾರು ಸುಳ್ಳು ಹೇಳುತ್ತಾರೆ ಗೊತ್ತಾಗುವುದಿಲ್ಲ. ಈ ಗೊಂದಲ ಸೃಷ್ಟಿ ಮಾಡಿದ್ದು ಜೆಡಿಎಸ್ ಪಕ್ಷದವರು. ಕುಮಾರಸ್ವಾಮಿ ಹೇಳಿಕೆ ಗಳು ಅವಮಾನಕ್ಕೆ ಕಾರಣವಾಗಿವೆ. ಮುಂದೆ ಏನು ಮಾಡುತ್ತಾರೊ ಅದು ಅವರಿಗೆ ಬಿಟ್ಟದ್ದು. ನಾವು ಮಾತ್ರ ಬಿಜೆಪಿ ವಿರುದ್ಧ ನಿರಂತರ ಹೋರಾಟ ಮಾಡುತ್ತೇವೆ ಎಂದರು.
ಜೆಡಿಎಸ್ ಪಕ್ಷಕ್ಕೆ ಒಂದು ಸ್ಪಷ್ಟವಾದ ನಿಲುವು, ಸಿದ್ಧಾಂತವೇ ಇಲ್ಲ. ಜೆಡಿಎಸ್ ಒಮ್ಮೆ ಯಾರೊಂದಿಗೂ ಸ್ನೇಹ ಬೆಳೆಸುತ್ತಾರೆ, ಇನ್ನೊಮ್ಮೆ ಯಾರೊಂದಿಗೂ ದ್ವೇಷ ಸಾಧಿಸುತ್ತಾರೆ. ಸಹಾಯ ಮಾಡಿದವರ ಜೊತೆ ಹೋಗುವ ಪಾರ್ಟಿ ಅದು ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…