ಉಡುಪಿ: ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದ ಈಶ್ವರಪ್ಪ ಈಗ ಮಂತ್ರಿಯಾಗಿದ್ದಾರೆ. ಅವರಿಗಿಂತ ರಾಜಕೀಯದಲ್ಲಿ ಕಿರಿಯರು ಇದೀಗಲೇ ಡಿಸಿಎಂ ಆಗಿದ್ದು ಸಚಿವ ಈಶ್ವರಪ್ಪರಿಗೆ ಸ್ವಾಭಿಮಾನ ಇಲ್ಲ ಒಂದು ವೇಳೆ ಸ್ವಾಭಿಮಾನಿ ಆಗಿದ್ದರೆ ಮಂತ್ರಿ ಆಗಬಾರದಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗುಡುಗಿದ್ದಾರೆ.
ಅವರು ಉಡುಪಿ ನಗರದ ಅಜ್ಜರಕಾಡಿನ ಪುರಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ದಲ್ಲಿ ಪಾಲ್ಗೊಳ್ಳಲು ಆಗಮಿಸಿದ ದಿನೇಶ್ ಗುಂಡೂರಾವ್ ಸುದ್ದಿಗಾರರೊಂದಿಗೆ ಮಾತನಾಡಿದರು. ಈಶ್ವರಪ್ಪನಿಗೆ ಯಾವುದೇ ಬದ್ಧತೆ ಇಲ್ಲ. ಅಹಿಂದ ಪರ ಒಂದೇ ಒಂದು ಹೋರಾಟ ಮಾಡಿದ ಇತಿಹಾಸವಿಲ್ಲ. ಈಶ್ವರಪ್ಪನಿಗೆ ಗಂಭೀರತೆಯಿಲ್ಲ ಅವರು ಗಹನವಾಗಿ ಮಾತನಾಡಲ್ಲ ಎಂದರು.
ಬಿಜೆಪಿ, ಜೆಡಿಎಸ್ ಉಪಚುನಾವಣೆ ಒಳ ಒಪ್ಪಂದ ವಿಚಾರದಲ್ಲಿ ದೇವೇಗೌಡ ಮತ್ತು ಯಡಿಯೂರಪ್ಪ ಇವರಲ್ಲಿ ಯಾರು ಸತ್ಯ ಮಾತನಾಡುತ್ತಾರೆ ಯಾರು ಸುಳ್ಳು ಹೇಳುತ್ತಾರೆ ಗೊತ್ತಾಗುವುದಿಲ್ಲ. ಈ ಗೊಂದಲ ಸೃಷ್ಟಿ ಮಾಡಿದ್ದು ಜೆಡಿಎಸ್ ಪಕ್ಷದವರು. ಕುಮಾರಸ್ವಾಮಿ ಹೇಳಿಕೆ ಗಳು ಅವಮಾನಕ್ಕೆ ಕಾರಣವಾಗಿವೆ. ಮುಂದೆ ಏನು ಮಾಡುತ್ತಾರೊ ಅದು ಅವರಿಗೆ ಬಿಟ್ಟದ್ದು. ನಾವು ಮಾತ್ರ ಬಿಜೆಪಿ ವಿರುದ್ಧ ನಿರಂತರ ಹೋರಾಟ ಮಾಡುತ್ತೇವೆ ಎಂದರು.
ಜೆಡಿಎಸ್ ಪಕ್ಷಕ್ಕೆ ಒಂದು ಸ್ಪಷ್ಟವಾದ ನಿಲುವು, ಸಿದ್ಧಾಂತವೇ ಇಲ್ಲ. ಜೆಡಿಎಸ್ ಒಮ್ಮೆ ಯಾರೊಂದಿಗೂ ಸ್ನೇಹ ಬೆಳೆಸುತ್ತಾರೆ, ಇನ್ನೊಮ್ಮೆ ಯಾರೊಂದಿಗೂ ದ್ವೇಷ ಸಾಧಿಸುತ್ತಾರೆ. ಸಹಾಯ ಮಾಡಿದವರ ಜೊತೆ ಹೋಗುವ ಪಾರ್ಟಿ ಅದು ಎಂದರು.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…