Featured

ನಾವು ಯುದ್ಧದಿಂದ ಸ್ವಾತಂತ್ರ್ಯ ಪಡೆದಿಲ್ಲ, ಶಾಂತಿಯಿಂದ ಗೆದ್ದಿದ್ದು : ಕೆ. ಹೆಚ್ ಮುನಿಯಪ್ಪ – vishwanews24

ನಾವು ಯುದ್ಧದಿಂದ ಸ್ವಾತಂತ್ರ್ಯ ಪಡೆದಿಲ್ಲ, ಶಾಂತಿಯಿಂದ ಗೆದ್ದಿದ್ದು : ಕೆಹೆಚ್ ಮುನಿಯಪ್ಪ

ಕೋಲಾರ: ನಾವು ಯುದ್ಧದಿಂದ ಸ್ವಾತಂತ್ರ್ಯ ಪಡೆದಿಲ್ಲ, ಶಾಂತಿಯಿಂದ ಯುದ್ಧ ಗೆದ್ದಿದ್ದು, ಹೀಗಾಗಿ ನಾವು ಶಾಂತಿಯಿಂದಲೇ ಸಾಧನೆ ಮಾಡಬೇಕು ಎಂದು ಆಹಾರ ಸಚಿವ ಕೆಹೆಚ್ ಮುನಿಯಪ್ಪ  ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿ ಪಾಕ್  ಮತ್ತು ಭಾರತದ  ನಡುವೆ ಕದನ ವಿರಾಮ ಘೋಷಣೆ ಮಾಡಿರುವುದರಲ್ಲಿ ಅಮೆರಿಕಕ್ಕೆ ಮಹತ್ವ ಸ್ಥಾನವಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ದೇಶದಲ್ಲಿ ಬ್ರಿಟಿಷರು 200 ವರ್ಷ ರಾಜ್ಯಭಾರ ಮಾಡಿದರು. ಆಗ ಅವರನ್ನು ನಾವು ಯುದ್ಧದಿಂದ ಗೆದ್ದಿಲ್ಲ, ಶಾಂತಿಯಿಂದ ಗೆದಿದ್ದು, ಗಾಂಧೀಜಿಯವರು ನಾವು ಶಾಂತಿಯಿಂದ ಸಾಧನೆ ಮಾಡಬೇಕೆಂದು ಹೇಳಿದ್ದಾರೆ. ಭಯೋತ್ಪಾದಕರು ವಿನಾಕಾರಣ ನಮ್ಮ ಜನರ ಮೇಲೆ ದಾಳಿ ಮಾಡಿದ್ದಕ್ಕೆ ಸಂಘರ್ಷ ಉಂಟಾಗುತ್ತಿದೆ. ನಾವು ಪಾಕಿಸ್ತಾನ ಮೇಲೆ ಯುದ್ಧ ಮಾಡಿಲ್ಲ, ನಾಗರಿಕರ ಮೇಲೆ ದಾಳಿ ಮಾಡಿಲ್ಲ, ಆದರೆ ಭಾರತೀಯ ಸೇನೆ ಭಯೋತ್ಪಾದಕರ ಮೇಲೆ ಪ್ರಹಾರ ಮಾಡಿದ್ದಾರೆ ಎಂದರು.

ವ್ಯಾಜ್ಯ ಆಗುವಾಗ ಹಿರಿಯರೊಬ್ಬರು ಬಂದು ಯುದ್ಧ ಬೇಡವೆಂದಾಗ ಅವರಿಗೆ ಗೌರವ ಕೊಡಬೇಕು, ಭಾರತದ ಪ್ರಧಾನಿಯವರು ಅಮೆರಿಕ ದೇಶಕ್ಕೆ ಗೌರವ ಕೊಟ್ಟಿದ್ದಾರೆ. ಭಾರತ ದೇಶ ನಾಗರಿಕರನ್ನು ಕಳೆದುಕೊಂಡಿದೆ, ಕಲಹದಿಂದ, ಯುದ್ಧದಿಂದ ಸಾಧನೆ ಮಾಡಲು ಸಾಧ್ಯವಿಲ್ಲ, ನಾವೆಲ್ಲರೂ ಮಾನವರು, ಮಾನವರಾಗಿ ಬಾಳೋಣ, ಅವರವರ ಧರ್ಮ ಅವರು ಪಾಲನೆ ಮಾಡಿಕೊಳ್ಳಲಿ ಎಂದು ತಿಳಿಸಿದರು.

Vishwa News 24

Recent Posts

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

2 hours ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

2 hours ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

2 hours ago

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24

 ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…

2 hours ago

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago